ನಾಳೆ ಬೆಳಿಗ್ಗೆ ಸಿಎಂ ಬಿಎಸ್ ಯಡಿಯೂರಪ್ಪರಿಂದ ಮಹತ್ವದ ಸುದ್ಧಿಗೋಷ್ಠಿ…

ಬೆಂಗಳೂರು,ಮೇ,18,2021(www.justkannada.in):  ರಾಜ್ಯದಲ್ಲಿ  ಹೆಚ್ಚುತ್ತಿರುವ ಕೊರೊನಾ 2ನೇ ಅಲೆ ತಡೆಗಟ್ಟಲು ಮೇ.24ರವರೆಗೆ  ಲಾಕ್ ಡೌನ್ ಜಾರಿ ಮಾಡಲಾಗಿದ್ದು, ಲಾಕ್ ಡೌನ್ ಮುಂದುವರೆಯುತ್ತೋ ಇಲ್ಲವೂ ಎಂಬ ಬಗ್ಗೆ ಚರ್ಚೆಯಾಗುತ್ತಿದೆ. ಈ ಮಧ್ಯೆ ನಾಳೆ ಸಿಎಂ ಬಿಎಸ್ ಯಡಿಯೂರಪ್ಪ ಮಹತ್ವದ ಸುದ್ಧಿಗೋಷ್ಠಿ ನಡೆಸಲಿದ್ದಾರೆ.jk

ನಾಳೆ ಬೆಳಿಗ್ಗೆ 11.30ಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ ನಡೆಸಲಿದ್ದು, ಈ ವೇಳೆ ಮೇ.24ರ ನಂತರ ಲಾಕ್ ಡೌನ್ ವಿಸ್ತರಣೆ ಮಾಡುವ ಕುರಿತು ಘೋಷಣೆ ಮಾಡುವ ಸಾಧ್ಯತೆ ಇದೆ. ಇನ್ನು ಸುದ್ದಿಗೋಷ್ಠಿಗೂ ಮುನ್ನ ಸಚಿವರ ಜತೆ ಸಭೆ ನಡೆಸಿ ಸಿಎಂ ಬಿಎಸ್ ವೈ ಚರ್ಚೆ ನಡೆಸಲಿದ್ದಾರೆ. corona-lockdown- CM BS Yeddyurappa -tomorrow –morning-pressmeet

ಈ ಬಳಿಕ ಸುದ್ದಿಗೋಷ್ಠಿಯಲ್ಲಿ ಕೊರೋನಾ ಕಂಟ್ರೋಲ್ ಕುರಿತಂತೆ ಮಹತ್ವದ ನಿರ್ಧಾರವನ್ನು ಸುದ್ದಿಗೋಷ್ಠಿಯಲ್ಲಿ ಪ್ರಕಟಿಸುವ ಸಾಧ್ಯತೆ ಇದೆ. ಹಾಗೆಯೇ ಇಂದು ಸಂಜೆ ಆರ್ಥಿಕ ಅಧಿಕಾರಿಗಳ ಜತೆ ಸಿಎಂ ಬಿಎಸ್ ವೈ ಸಭೆ ನಡೆಸಲಿದ್ದು, ನಾಳೆ ಬಡವರು, ಕೂಲಿಕಾರ್ಮಿಕರು, ಸಂಕಷ್ಟದಲ್ಲಿರುವವರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುತ್ತಾರೆಯೇ ಕಾದು ನೋಡಬೇಕಿದೆ.  ಹೀಗಾಗಿ ನಾಳಿನ ಸಿಎಂ ಯಡಿಯೂರಪ್ಪ ಅವರ ಸುದ್ದಿಗೋಷ್ಠಿ ತೀವ್ರ ಕುತೂಹಲ ಕೆರಳಿಸಿದೆ.

Key words: corona-lockdown- CM BS Yeddyurappa -tomorrow –morning-pressmeet