ಕೊರೋನಾ ರೂಪಾಂತರ ಪತ್ತೆ ಹಿನ್ನೆಲೆ:  ವಿಮಾನ ನಿಲ್ದಾಣಗಳಲ್ಲಿ ಕಟ್ಟು ನಿಟ್ಟಾಗಿ ತಪಾಸಣೆಗೆ ಸಿಎಂ ಬಿಎಸ್ ವೈ ಸೂಚನೆ…

kannada t-shirts

ಬೆಂಗಳೂರು,ಡಿಸೆಂಬರ್,22,2020(www.justkannada.in): ಬ್ರಿಟನ್ ನಲ್ಲಿ ಕೋವಿಡ್-19 ಸೋಂಕು ರೂಪಾಂತರ ಪತ್ತೆಯಾಗಿದ್ದು, ಚೆನ್ನೈಗೆ ಬಂದಿರುವ ವ್ಯಕ್ತಿಯಲ್ಲಿ ಕಾಣಿಸಿಕೊಂಡಿದೆ. ಹೀಗಾಗಿ ವಿಮಾನ ನಿಲ್ದಾಣಗಳಲ್ಲಿ ಕಟ್ಟು ನಿಟ್ಟಾಗಿ ತಪಾಸಣೆ ಮಾಡುವಂತೆ ಸಿಎಂ ಬಿಎಸ್ ಯಡಿಯೂರಪ್ಪ ಸೂಚಿಸಿದ್ದಾರೆ.Teachers,solve,problems,Government,bound,Minister,R.Ashok

ಈ ಕುರಿತು ಮಾತನಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ, ಕೋವಿಡ್-19 ಸೋಂಕು ರೂಪಾಂತರದ ವಿಚಾರ ಇಡೀ ರಾಜ್ಯ ಮತ್ತು ದೇಶದ ಜನರನ್ನು ಇದು ಆತಂಕಕ್ಕೀಡು ಮಾಡಿದೆ. ಚೆನ್ನೈಗೆ ಬಂದಿರುವ ವ್ಯಕ್ತಿಯಲ್ಲಿ ಕಾಣಿಸಿಕೊಂಡಿದೆ. ಹೀಗಾಗಿ ಎಷ್ಟು ಕಟ್ಟೆಚ್ಚರ ವಹಿಸಿದರೂ ಕಡಿಮೆಯೇ  ಎಂದು ತಿಳಿಸಿದರು.

ವಿಮಾನ ನಿಲ್ದಾಣದಲ್ಲಿ  ಕಟ್ಟು ನಿಟ್ಟಾಗಿ ತಪಾಸಣೆ ಮಾಡಲಾಗುತ್ತದೆ. ದೇಶಾದ್ಯಂತ ಈಗಾಗಲೇ ಅಲರ್ಟ್ ಇದೆ. ಪ್ರಧಾನಿ ಕೂಡಾ ಆತಂಕಕ್ಕೊಳಗಾಗಿ ಎಚ್ಚರಿಕೆಯಿಂದ ಇರುವಂತೆ ತಿಳಿಸಿದ್ದಾರೆ. ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ವೈರಸ್ ಹರಡದಂತೆ ಬೇಕಿರುವ ಎಚ್ಚರಿಕೆ ವಹಿಸುತ್ತೇವೆ ಎಂದು ಬಿಎಸ್ ಯಡಿಯೂರಪ್ಪ ಹೇಳಿದರು.

Key words: Corona- mutation –detection- CM BS Yeddyurappa – Inspection – Airports.

 

website developers in mysore