ಮಾಜಿ ಸಿಎಂ ಬಿಎಸ್ ವೈ ಕುಟುಂಬದ ವಿರುದ್ಧ ಭ‍್ರಷ್ಟಾಚಾರ ಆರೋಪ: ಪ್ರಕರಣ ಮರು ವಿಚಾರಣೆಗೆ ಕೋರ್ಟ್ ಆದೇಶ.

ಬೆಂಗಳೂರು, ಸೆಪ್ಟಂಬರ್,7,2022(www.justkannada.in):  ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ  ಮರು ವಿಚಾರಣೆಗೆ ಹೈಕೋರ್ಟ್ ಆದೇಶಿಸಿದೆ.

ಪ್ರಾಸಿಕ್ಯೂಷನ್ ​​ಗೆ ಪೂರ್ವಾನುಮತಿ ಸಿಗದಿದ್ದಕ್ಕೆ ಕೇಸ್ ವಜಾಗೊಂಡಿತ್ತು.  ವಿಚಾರಣಾ ಕೋರ್ಟ್​​​ ವಜಾ ಆದೇಶವನ್ನು ಹೈಕೋರ್ಟ್  ರದ್ದುಪಡಿಸಿದ್ದು,  ಪ್ರಕರಣ ಮರು ವಿಚಾರಣೆಗೆ ಆದೇಶಿಸಿದೆ.

ಬಿಎಸ್ ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ,‌ ಶಶಿಧರ ಮರಡಿ, ಸಂಜಯ್​​ಶ್ರೀ, ಚಂದ್ರಕಾಂತ ರಾಮಲಿಂಗಮ್, ವಿರುಪಾಕ್ಷಪ್ಪ ಯಮಕನಮರಡಿ, ಎಸ್​.ಟಿ.ಸೋಮಶೇಖರ್, ಡಾ.ಜಿ.ಸಿ.ಪ್ರಕಾಶ್, ಕೆ.ರವಿ,  ವಿರುದ್ಧ ಕೇಸ್ ದಾಖಲಾಗಿತ್ತು. ದೂರುದಾರ ಟಿ.ಜೆ.ಅಬ್ರಹಾಂ ಅರ್ಜಿ ಸಲ್ಲಿಸಿದ್ದರು.  ಪ್ರಾಸಿಕ್ಯೂಷನ್‌ ಗೆ ರಾಜ್ಯಪಾಲರ ಪೂರ್ವಾನುಮತಿ ನಿರಾಕರಣೆ ಹಿನ್ನೆಲೆ ಇತ್ತೀಚೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆಗೆ ಆದೇಶಿಸಲು ನಿರಾಕರಿಸಿತ್ತು. ಹೀಗಾಗಿ ಟಿ.ಜೆ.ಅಬ್ರಹಾಂ ಹೈಕೋರ್ಟ್ ಮೆಟ್ಟಿಲೇರಿದ್ದರು.

ಅಮಿಕಸ್ ಕ್ಯೂರಿಯಾಗಿ ವೆಂಕಟೇಶ್ ಅರಬಟ್ಟಿ ವಾದಿಸಿದ್ದರು. ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಲು ಕಾಲಾವಕಾಶ ಕೋರಿ ಹೈಕೋರ್ಟ್​ಗೆ ಬಿಎಸ್​ವೈ ಪರ ವಕೀಲ ಸಂದೀಪ್ ಪಾಟೀಲ್ ಮನವಿ ಮಾಡಿದ್ದಾರೆ. ಕಾಲಾವಕಾಶದ ಬಗ್ಗೆ ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಮಾನಿಸಲಿ ಎಂದು ಬಿ.ಎಸ್.ಯಡಿಯೂರಪ್ಪ ಪರ ವಕೀಲರಿಗೆ ಹೈಕೋರ್ಟ್ ಪ್ರತಿಕ್ರಿಯೆ ನೀಡಿದೆ.

Key words: Corruption-allegation-against-former CM- BS yeddyurappa-retrial- case.