‘ವೀರಪ್ಪನ್- ಹಂಗರ್‌ ಫಾರ್‌ ಕಿಲ್ಲಿಂಗ್‌’ ವೆಬ್ ಸಿರೀಸ್ ಬಿಡುಗಡೆಗೆ ಕೋರ್ಟ್ ತಡೆ

kannada t-shirts

ಬೆಂಗಳೂರು, ಜನವರಿ 13, 2020 (www.justkannada.in): ‘ವೀರಪ್ಪನ್- ಹಂಗರ್‌ ಫಾರ್‌ ಕಿಲ್ಲಿಂಗ್‌’ ಎಂಬ ವೆಬ್‌ ಸೀರೀಸ್‌ ಪ್ರಸಾರಕ್ಕೆ ಕೋರ್ಟ್ ತಡೆ ನೀಡಿದೆ.

ಕಾಡುಗಳ್ಳ ವೀರಪ್ಪನ್‌ ಜೀವನ ಚರಿತ್ರೆ ಆಧರಿಸಿ ನಿರ್ಮಿಸಿರುವ ‘ವೀರಪ್ಪನ್- ಹಂಗರ್‌ ಫಾರ್‌ ಕಿಲ್ಲಿಂಗ್‌’ ವೆಬ್‌ ಸೀರೀಸ್‌ ಚಿತ್ರವನ್ನು ಯೂ ಟ್ಯೂಬ್‌ ಸೇರಿದಂತೆ ಒಟಿಟಿ ವೇದಿಕೆಯಲ್ಲಿ ಬಿಡುಗಡೆ ಮಾಡದಂತೆ ಬೆಂಗಳೂರು ಪ್ರಧಾನ ಸಿಟಿ ಸಿವಿಲ್‌ ಮತ್ತು ಸೆಷನ್ಸ್ ನ್ಯಾಯಾಲಯ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ.

ಅಟ್ಟಹಾಸ ಸಿನಿಮಾ ನಿರ್ದೇಶಿಸಿದ್ದ ನಿರ್ದೇಶಕ ಎ.ಎಂ ಸುರೇಶ್ ವೀರಪ್ಪನ್ ಜೀವನಾಧಾರಿತ ವೆಬ್ ಸೀರೀಸ್ ” ಹಂಗರ್ ಫರ್ ಕಿಲ್ಲಿಂಗ್ ” ನಿರ್ಮಾಣ ಮಾಡಿದ್ದರು.

ಈ ವೆಬ್ ಸೀರೀಸ್ ಬಿಡುಗಡೆಯಾದರೆ ನಮ್ಮ ಬದುಕಿಗೆ ಧಕ್ಕೆಯಾಗಲಿದೆ ಎಂದು ವೀರಪ್ಪನ್ ಪತ್ನಿ ಮುತ್ತು ಲಕ್ಷ್ಮೀ ನ್ಯಾಯಾಲಯದ ಮೊರೆ ಹೋಗಿದ್ದರು.

website developers in mysore