ಕ್ರಿಕೆಟ್‌ ಟೀಂ ಇಂಡಿಯಾ ಜಿಂಬಾಬ್ವೆ ಪ್ರವಾಸವೂ ಕ್ಯಾನ್ಸಲ್

ಹೊಸದಿಲ್ಲಿ, ಜೂನ್ 13, 2020 (www.justkannada.in):: ಟೀಮ್‌ ಇಂಡಿಯಾದ ಮುಂಬರುವ ಜಿಂಬಾಬ್ವೆ ಕ್ರಿಕೆಟ್‌ ಪ್ರವಾಸವನ್ನೂ ಬಿಸಿಸಿಐ ಕೋವಿಡ್-19 ಕಾರಣದಿಂದ ರದ್ದುಗೊಳಿಸಿದೆ.

ಶ್ರೀಲಂಕಾ ಪ್ರವಾಸವನ್ನು ರದ್ದುಗೊಳಿಸಿದ ಒಂದೇ ದಿನದಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಈ ವಿಷಯವನ್ನು ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಅಧಿಕೃತವಾಗಿ ಪ್ರಕಟಿಸಿದ್ದಾರೆ.

ಭಾರತ ತಂಡ ಶ್ರೀಲಂಕಾ ಪ್ರವಾಸ ಮುಗಿಸಿ ಆಗಸ್ಟ್‌ನಲ್ಲಿ ಜಿಂಬಾಬ್ವೆಗೆ ಕಿರು ಪ್ರವಾಸ ಕೈಗೊಳ್ಳುವ ಕಾರ್ಯಕ್ರಮವಿತ್ತು. ಆ. 22ರಿಂದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಬೇಕಿತ್ತು.

ಆದರೆ ದೇಶದಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಬಾರದ ಕಾರಣ ಈ ಎರಡೂ ಪ್ರವಾಸ ಗಳನ್ನು ರದ್ದುಗೊಳಿಸಲಾಗಿದೆ ಎಂದು ಶಾ ಹೇಳಿದರು. ಶ್ರೀಲಂಕಾದಲ್ಲಿ 3 ಏಕದಿನ ಹಾಗೂ 3 ಟಿ20 ಪಂದ್ಯಗಳ ಸರಣಿಯನ್ನು ಆಯೋಜಿಸಲಾಗಿತ್ತು.