ಕ್ರೂಸರ್ ಡಿಕ್ಕಿ: ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಸಾವು

ಧಾರವಾಡ,ಸೆ,6,2019(www.justkannada.in): ಕ್ರೂಸರ್ ಹಾಗೂ  ಬೈಕ್  ನಡುವೆ ಅಪಘಾತ ಸಂಭವಿಸಿದ  ಪರಿಣಾಮ ಬೈಕ್ ನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ನವಲಗುಂದ ತಾಲೂಕು ಅಳಗವಾಡಿ ಬಳಿ ಈ ಘಟನೆ ನಡೆದಿದೆ. ಮಹಾಂತೇಶ ನಿಂಗಪ್ಪ ಗುಜ್ಜಳ (26), ಚಂದ್ರಗೌಡ ಶಿವನಗೌಡ ರಾಯನಗೌಡ (28) ಹಾಗೂ ಹೆಬ್ಬಾಳ ಗ್ರಾಮದ ಆನಂದ ನಿಂಗಪ್ಪ ಜೆಟ್ಟೆನವರ (26) ಮೃತಪಟ್ಟ ಯುವಕರು. ಬೈಕ್ ಕ್ರೂಸರ್ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ.

ಸ್ಥಳಕ್ಕೆ ನವಲಗುಂದ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ  ಪ್ರಕರಣ ದಾಖಲಿಸಿಕೊಂಡಿದ್ದಾರೆ.

Key words: Cruiser –collision-  Three- killed – bike accident