ಆರ್.ಎಸ್.ಎಸ್ ಅಖಿಲ ಭಾರತ ಸರಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ನೇಮಕ : ಸಿಎಂ ಬಿ.ಎಸ್.ವೈ ಅಭಿನಂದನೆ

ಬೆಂಗಳೂರು,ಮಾರ್ಚ್,20,2021(www.justkannada.in) : ಆರ್.ಎಸ್.ಎಸ್ ನ 2ನೇ ಅತ್ಯುನ್ನತ ಹುದ್ದೆಯಾದ ಅಖಿಲ ಭಾರತ ಸರಕಾರ್ಯವಾಹರಾಗಿ ನಿಯುಕ್ತಿ ಹೊಂದಿರುವ ಕರ್ನಾಟಕದ ದತ್ತಾತ್ರೇಯ ಹೊಸಬಾಳೆಯವರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಅಭಿನಂದನೆ ತಿಳಿಸಿದ್ದಾರೆ.

ಈ ಜವಾಬ್ದಾರಿಯು ಅವರ ಪ್ರತಿಭೆ, ಸಾಮರ್ಥ್ಯಕ್ಕೆ ಸಂದ ಗೌರವವಾಗಿದ್ದು, ಇದನ್ನೂ ಕೂಡ ಅವರು ಯಶಸ್ವಿಯಾಗಿ ನಿರ್ವಹಿಸಲಿ ಎಂದು ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಬಾಲ್ಯದಿಂದಲೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರಿಯ, ನಿಷ್ಠಾವಂತ ಸ್ವಯಂ ಸೇವಕರಾಗಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ, ಉನ್ನತ ಸ್ಥಾನಕ್ಕೇರಿರುವುದು ಹೆಮ್ಮೆಯ ವಿಷಯ. ಸಂಘಟನಾ ಚಾತುರ್ಯ, ಸಮಾಜದ ಆಗುಹೋಗುಗಳ ಕುರಿತ ಅರಿವು, ಸಂವೇದನಾಶೀಲತೆ ಹೊಂದಿರುವ ಅವರು ಬಹುವಿಧ ಆಸಕ್ತಿ ಹಾಗೂ ಬಹುಮುಖ ಪ್ರತಿಭೆಯ ಸಂಗಮ ಎಂದಿದ್ದಾರೆ.

ತುರ್ತು ಪರಿಸ್ಥಿತಿ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಹೊಸಬಾಳೆಯವರು ಅಂದಿನ ಕರಾಳ ಅನುಭವದ ಚಿತ್ರಣ ನೀಡುವ ‘ಭುಗಿಲು’ ಸಂಪಾದನಾ ತಂಡದ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ. ಇಂಡಿಯಾ ಪಾಲಿಸಿ ಫೌಂಡೇಷನ್ ನ ಸ್ಥಾಪಕ ಸದಸ್ಯರಾಗಿ, ‘ಅಸೀಮಾ’ ಮಾಸ ಪತ್ರಿಕೆಯ ಸ್ಥಾಪಕ ಸಂಪಾದಕರಾಗಿ ಗಮನ ಸೆಳೆದವರು ಎಂದು ಅವರು ಶ್ಲಾಘಿಸಿದ್ದಾರೆ.

Dattatreya Hosabal-appointed-RSS-All-India-General Secretary-Congratulations-CM BSY

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತ ಸರಕಾರ್ಯವಾಹರ ಹೊಣೆಗಾರಿಕೆ ಅವರ ಪ್ರತಿಭೆ, ಸಾಮರ್ಥ್ಯಕ್ಕೆ ಸಂದ ಗೌರವವಾಗಿದೆ. ಭಗವಂತನು ಅವರಿಗೆ ಆಯುರಾರೋಗ್ಯವನ್ನು ಕರುಣಿಸಿ, ಭಾರತಮಾತೆಯ ಸೇವೆಯಲ್ಲಿ ಇನ್ನಷ್ಟು ತತ್ಪರರಾಗಲು ಸ್ಫೂರ್ತಿ ನೀಡಲಿ ಎಂದು ಹಾರೈಸುವುದಾಗಿ ಬಿ.ಎಸ್.ವೈ ತಿಳಿಸಿದ್ದಾರೆ.

key words : Dattatreya Hosabal-appointed-RSS-All-India-General Secretary-Congratulations-CM BSY