ನಟಿ ಸುಧಾರಾಣಿ ಸೋದರನ ಪುತ್ರಿ ಚಿಕಿತ್ಸೆಗೆ ಪರದಾಟ ವಿಚಾರ: ನಿರ್ಲಕ್ಷ್ಯ ವಹಿಸಿದ ಆಸ್ಪತ್ರೆಯ ವಿರುದ್ದ ಶಿಸ್ತು ಕ್ರಮ- ಸಚಿವ ಸುಧಾಕರ್ …

ಬೆಂಗಳೂರು,ಜು,28,2020(www.justkannada.in):  ನಟಿ ಸುಧಾರಾಣಿ ಸೋದರನ ಪುತ್ರಿಗೆ ಚಿಕತ್ಸೆಗೆ ಪರದಾಟ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್,  ನಿರ್ಲಕ್ಷ್ಯ ವಹಿಸಿದ ಆಸ್ಪತ್ರೆ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.daughter-brother-actress-sudharani-action-hospitals-minister-sudhakar

ಈ ಕುರಿತು ಟ್ವೀಟ್ ಮಾಡಿರುವ ಸಚಿವ ಸುಧಾಕರ್, ನಟಿ ಸುಧಾರಾಣಿ ಆರೋಗ್ಯ ಸಮಸ್ಯೆಯಿಂದ ಶೇಷಾದ್ರಿಪುರಂ ಅಪೋಲೊ ಆಸ್ಪತ್ರೆಗೆ ಬಂದರೂ ಚಿಕಿತ್ಸೆಗೆ ತಡ ಮಾಡಿದ್ದಾರೆ ಎಂಬ ಸುದ್ಧಿ ಮಾಧ್ಯಮಗಳಲ್ಲಿ ನೋಡಿದೆ.  ಅವರಷ್ಟೆ ಅಲ್ಲ ಸಾಮಾನ್ಯ ವ್ಯಕ್ತಿ ಯಾರೇ ಆಗಲಿ ಚಿಕಿತ್ಸೆ ಸಿಗದೆ ಪರದಾಡಬಾರದು. ಆ ಖಾಸಗಿ ಆಸ್ಪತ್ರೆ ವಿರುದ್ದ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ನಟಿ ಸುಧಾರಾಣಿ ಅವರ  ಸಹೋದರನ ಮಗಳಿಗೆ ಅನಾರೋಗ್ಯದಿಂದ ಆಸ್ಪತ್ರೆಗೆ ಕರೆತಂದು ಮನವಿ ಮಾಡಿದರೂ ಸಕಾಲಕ್ಕೆ ಚಿಕಿತ್ಸೆ ದೊರೆತಿಲ್ಲ. ಒಂದು ಗಂಟೆಗೂ ಅಧಿಕ ಕಾಲ ಆಸ್ಪತ್ರೆಯ ಗೇಟ್ ಬಳಿಯೇ ಸುಧಾರಾಣಿ ಕಾದಿದ್ದಾರೆ.daughter-brother-actress-sudharani-action-hospitals-minister-sudhakar

ಆಸ್ಪತ್ರೆಯಲ್ಲಿ ಬೆಡ್, ವೆಂಟಿಲೇಟರ್ ಇಲ್ಲ ಎಂದು ಸಬೂಬು ಹೇಳಿದ ಖಾಸಗಿ ಆಸ್ಪತ್ರೆ ಸಿಬ್ಬಂದಿ ಪ್ರವೇಶವನ್ನೇ ನೀಡಿಲ್ಲ. ಈ ವೇಳೆ ಕೊನೆಗೆ ಸುಧಾರಾಣಿ ಪೊಲೀಸ್ ಆಯುಕ್ತರಿಗೆ ಫೋನ್ ಮಾಡಿದ್ದು ಬಳಿಕ ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಗಿದೆ.

Key words: Daughter – Brother-actress -Sudharani -action – hospitals-Minister- Sudhakar