ಮಾಧ್ಯಮ ಮತ್ತು ಕೇಬಲ್ ಸಿಬ್ಬಂದಿಗೆ ವ್ಯಾಕ್ಸಿನ್ ಅಭಿಯಾನಕ್ಕೆ ಡಿಸಿಎಂ ಅಶ್ವಥ್ ನಾರಾಯಣ್ ಚಾಲನೆ.

ಬೆಂಗಳೂರು,ಜೂನ್,4,2021(www.justkannada.in):  ಎಲ್ಲ ಬಗೆಯ ಮಾಧ್ಯಮಗಳ ಪ್ರತಿನಿಧಿಗಳು, ಪತ್ರಿಕೆಗಳ ವಿತರಕರು, ಕೇಬಲ್ ಆಪರೇಟರ್ ಗಳು ಸೇರಿ ವಿವಿಧ ವರ್ಗಗಳ ಮುಂಚೂಣಿ ಕಾರ್ಯಕರ್ತರು-ಆದ್ಯತಾ ಗುಂಪಿನ ಜನರಿಗೆ ವ್ಯಾಕ್ಸಿನ್ ನೀಡುವ ಅಭಿಯಾನಕ್ಕೆ ರಾಜ್ಯ ಕೋವಿಡ್  ಕಾರ್ಯಪಡೆ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಚಾಲನೆ ನೀಡಿದರು.jk

ನಗರದ ಮಲ್ಲೇಶ್ವರ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಈ ಲಸಿಕೆ ಅಭಿಯಾನಕ್ಕೆ ಶುಕ್ರವಾರ ಚಾಲನೆ ನೀಡಿದ ನಂತರ  ಡಿಸಿಎಂ ಅಶ್ವಥ್ ನಾರಾಯಣ್, ಮಾಧ್ಯಮಗಳ ಜತೆ ಮಾತನಾಡಿದರು.

ಈಗಾಗಲೇ ಫ್ರಂಟ್ ಲೈನ್ ಕಾರ್ಯಕರ್ತರಿಗೆ ಅದರಲ್ಲೂ ಮುಖ್ಯವಾಗಿ ಟೆಲಿಕಾಂ, ಇಂಟರ್ನೆಟ್ ಸಂಪರ್ಕ ಕಲ್ಪಿಸುವ ಸಿಬ್ಬಂದಿಯ ಜತೆಗೆ, ಪತ್ರಿಕೆ & ವಿದ್ಯುನ್ಮಾನ ಮಾಧ್ಯಮಗಳ ಸಿಬ್ಬಂದಿಗೆ ಕೇಂದ್ರದ ಮಾರ್ಗಸೂಚಿಯಂತೆ ಈ ಲಸಿಕೆ ಕೊಡಲಾಗುತ್ತಿದೆ ಎಂದರು.

ಇವರೆಲ್ಲರೂ ಜನರ ಸಂಪರ್ಕದಲ್ಲಿ ಹೆಚ್ಚು ಇರುತ್ತಾರೆ. ಹೀಗಾಗಿ ಇವರಿಗೆ ಸೋಂಕಿನ ಅಪಾಯ ಹೆಚ್ಚು. ಆದ್ದರಿಂದ ಆದ್ಯತೆಯ ಮೇಲೆ ಇವರೆಲ್ಲರಿಗೂ ಲಸಿಕೆ ಕೊಡಲಾಗುತ್ತಿದೆ. ರಾಜ್ಯಾದ್ಯಂತ ಈ ಗುಂಪಿಗೆ ಲಸಿಕಾ ಅಭಿಯಾನ ಉತ್ತಮವಾಗಿ ನಡೆಯುತ್ತಿದೆ ಎಂದರು.

ಶಾಸಕ ರವಿಕುಮಾರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವನಾಂದ ತಗಡೂರು, ಕೇಬಲ್ ಆಪರೇಟರ್ಸ್ ಸಂಘದ ರಾಮ ಪ್ರಸಾದ್  ಮುಂತಾದವರು ಈ ಸಂದರ್ಭದಲ್ಲಿ ಇದ್ದರು.

Key words: DCM -Ashwath Narayan- vaccine -campaign – media -cable staff