ಪ್ರತಿಭಟನಾಕಾರರನ್ನ ತಡೆಯುವ ವೇಳೆ ಡಿಸಿಪಿ ಕಾಲಿನ ಮೇಲೆ ಹರಿದ ಕಾರು.

ಬೆಂಗಳೂರು,ಸೆಪ್ಟಂಬರ್,27,2021(www.justkannada.in): ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ಭಾರತ್ ಬಂದ್ ಮಾಡಲಾಗುತ್ತಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ ಹಲವು ಕಡೆಗಳಲ್ಲಿ ರೈತರ ಧರಣಿ ನಡೆಸುತ್ತಿದ್ದು  ಈ ಮಧ್ಯೆ ಪ್ರತಿಭಟನಾಕಾರರನ್ನ ತಡೆಯುತ್ತಿದ್ದ ಡಿಸಿಪಿ  ಕಾಲಿನ ಮೇಲೆ ಕಾರು ಹರಿದಿರುವ ಘಟನೆ ನಡೆದಿದೆ.

ಬೆಂಗಳೂರಿನ ಗೊರಗುಂಟೆಪಾಳ್ಯದ ಬಳಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಸ್ಥಳಕ್ಕಾಗಮಿಸಿದ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ಅವರು ಪ್ರತಿಭಟನಾಕಾರರನ್ನ ತಡೆಯಲು ಮುಂದಾಗಿದ್ದರು. ಈ ವೇಳೆ ಕಾರೋಂದು ಅವರ ಕಾಲಿನ ಮೇಲೆ ಹರಿದಿದೆ.

ಸದ್ಯ ಧರ್ಮೇಂದ್ರ ಕುಮಾರ್ ಮೀನಾಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಇನ್ನು ಕಾರು ಹರಿಸಿದ ಚಾಲಕನ್ನ ಆರ್ ಎಂಸಿ ಯಾರ್ಡ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Key words: DCP- leg- car –barath bandh-protesters-bangalore