ಖ್ಯಾತ ನಿರ್ದೇಶಕ ರೇಣುಕಾ ಶರ್ಮ ಕೋವಿಡ್ ಗೆ ಬಲಿ: ಟಿ. ಎಸ್ ನಾಗಾಭರಣ ಸಂತಾಪ…

ಬೆಂಗಳೂರು,6,2021(www.justkannada.in):  ಕವಿರತ್ನ ಕಾಳಿದಾಸ, ಶಬರಿಮಲೆ ಅಯ್ಯಪ್ಪ ಸೇರಿದಂತೆ ಹಲವು ಉತ್ಕೃಷ್ಟ ಐತಿಹಾಸಿಕ ಮತ್ತು ಭಕ್ತಿಪ್ರಧಾನ ಕನ್ನಡ ಸಿನಿಮಾ ನಿರ್ದೇಶನ ಮಾಡಿದ ಖ್ಯಾತ ನಿರ್ದೇಶಕ, ಆತ್ಮೀಯ ರೇಣುಕಾ ಶರ್ಮ ಕೋವಿಡ್ ಗೆ ಬಲಿಯಾಗಿದ್ದು, ಅತ್ಯಂತ ನೋವಿನ ವಿಷಯವಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ ಎಸ್ ನಾಗಾಭರಣ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.director-renuka-sharma-covid-death-ts-nagabharana

ಕವಿರತ್ನ ಕಾಳಿದಾಸ ಸಿನಿಮಾದಲ್ಲಿ ಡಾ. ರಾಜ್ ಕುಮಾರ್  ಅವರ ಅಮೋಘ ಅಭಿನಯವನ್ನು ಅನಾವರಣಗೊಳಿಸಿದ್ದರು. ಕೋವಿಡ್ ಪಾಸಿಟಿವ್ ನಿಂದಾಗಿ ಎರಡು ದಿನಗಳ ಹಿಂದಷ್ಟೇ ಚಿಕಿತ್ಸೆಗಾಗಿ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಅನಂತ ನಾಗ್ -ಮಾಧವಿ ಅಭಿನಯದ ಅನುಪಮ ಚಿತ್ರ ನಿರ್ದೇಶನದ ಮೂಲಕ ಕನ್ನಡ ಚಿತ್ರ ರಂಗಕ್ಕೆ ಪಾದಾರ್ಪಣೆ ಮಾಡಿದ ರೇಣುಕಾಶರ್ಮ ಅವರು ಐತಿಹಾಸಿಕ ಹಾಗೂ ಭಕ್ತಿ ಪ್ರಧಾನ ಚಿತ್ರಗಳನ್ನು ಅರ್ಥಪೂರ್ಣವಾಗಿ ತೆರೆಗೆ ತರುತ್ತಿದ್ದ ದೈತ್ಯ ಪ್ರತಿಭೆ ರೇಣುಕಾ ಶರ್ಮ ಎಂದು ಶ್ಲಾಘಿಸಿದ್ದಾರೆ.

ರಾಜ್ ಕುಮಾರ್ ಅಭಿನಯದ ಕವಿರತ್ನ ಕಾಳಿದಾಸ ಅವರು ಅತ್ಯಂತ ಯಶಸ್ವಿ ಚಿತ್ರವಾಗಿತ್ತು. ನಮ್ಮೂರ ದೇವತೆ, ಶಹಬ್ಬಾಸ್ ವಿಕ್ರಮ್, ಅಂಜದ ಗಂಡು, ಶಬರಿಮಲೈ ಅಯ್ಯಪ್ಪ, ಶ್ರೀ ಅಯ್ಯಪ್ಪ, ಬರ್ಜರಿ ಗಂಡ, ಕಿಂದರಿ ಜೋಗಿ, ಕೊಲ್ಲಾಪುರ ಶ್ರೀ ಮೂಕಾಂಬಿಕೆ, ಮಹಾಸಾದ್ವಿ ಮಲ್ಲಮ್ಮ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿದ್ದರು.director-renuka-sharma-covid-death-ts-nagabharana

ಅವರ ಅಭಿಮಾನಿಗಳು ಹಾಗೂ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ ಟಿ.ಎಸ್  ನಾಗಾಭರಣ ಅವರು, ಹೀಗೆ ನಿರಂತರವಾಗಿ ಕನ್ನಡದ ವಿವಿಧ ಕ್ಷೇತ್ರದ ಮಹನೀಯರನ್ನು ಕಳೆದುಕೊಳ್ಳುತ್ತಿರುವುದು ನಿಜಕ್ಕೂ ಮನಸ್ಸನ್ನು ಆದ್ರಗೊಳಿಸಿದೆ. ಹಿಂದೆಂದೂ ಕಾಣದಂತಹ ಇಂತಹ ದುರಿತ ಕಾಲ ಇದಾಗಿದ್ದು ಯಾರೊಬ್ಬರೂ ಉದಾಸೀನ ಮಾಡದೆ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ.

Key words: director-Renuka Sharma – covid-death-TS Nagabharana