ಮಂಡ್ಯ ಜಿಲ್ಲಾ ಬಿಜೆಪಿಯಲ್ಲಿ ಭಿನ್ನಮತ: ಗೋ ಬ್ಯಾಕ್ ಆರ್. ಅಶೋಕ್ ಎಂದು ಭಿತ್ತಿಪತ್ರ ಅಂಟಿಸಿ ಆಕ್ರೋಶ.

kannada t-shirts

ಮಂಡ್ಯ,ಜನವರಿ,26,2023(www.justkannada.in): ಮಂಡ್ಯ ಜಿಲ್ಲಾ ಉಸ್ತುವಾರಿ ಬದಲಾವಣೆಯಾದ ಬೆನ್ನಲ್ಲೆ  ಮಂಡ್ಯ ಜಿಲ್ಲಾ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ.

ಮಂಡ್ಯ ಜಿಲ್ಲಾ ಉಸ್ತುವಾರಿ ಸ್ಥಾನದಿಂದ ಗೋಪಾಲಯ್ಯರನ್ನ ದಿಢೀರ್ ಬದಲಾವಣೆ ಮಾಡಿ  ಸಚಿವ ಅಶೋಕ್ ಆ ಜವಾಬ್ದಾರಿ ನೀಡಿದ್ದಕ್ಕೆ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದ ವಿವಿ ರಸ್ತೆ, ಸುಭಾಷ್​​ ರಸ್ತೆ ಗೋಡೆ ಮೇಲೆ ‘ಗೋ ಬ್ಯಾಕ್​ ಆರ್​.ಅಶೋಕ್’​ ಮಂಡ್ಯ ಬಿಟ್ಟು ಹೋಗಿ ಅಶೋಕ್ ಎಂಬ ಭಿತ್ತಿಪತ್ರ ಅಂಟಿಸಿ ಆಕ್ರೋಶ ವ್ಯಕ್ತಪಡಿಸಲಾಗಿದೆ.

ಇನ್ನು ಉಸ್ತುವಾರಿ ಸಚಿವರಾಗಿ ಆರ್​.ಅಶೋಕ್ ನೇಮಿಸಿದ್ದಕ್ಕೆ ಆರ್​​.ಅಶೋಕ್​ ವಿರುದ್ಧ ಪರೋಕ್ಷವಾಗಿ ಅಸಮಧಾನ ವ್ಯಕ್ತಪಡಿಸಿರುವ ಬಿಜೆಪಿ ಮುಖಂಡ ಸಿದ್ದರಾಮಯ್ಯ, ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಸದೃಢವಾಗಿದೆ. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಉತ್ತಮ ಕೆಲಸ ಮಾಡುತ್ತಿದ್ದರು. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಬೇಕಿರಲಿಲ್ಲ. ಅಶೋಕ್ ವಿರುದ್ಧ ಹೊಂದಾಣಿಕೆ ರಾಜಕಾರಣ ಮಾಡಿದ ಆರೋಪವಿದೆ. ಆದರೆ ಜಿಲ್ಲೆಯಲ್ಲಿ ಹೊಂದಾಣಿಕೆ ರಾಜಕೀಯ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.

Key words: Dissent – Mandya- district –BJP-Go back –R. Ashok- poster

website developers in mysore