ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿದ ಪ್ರಕರಣ: ನನಗೆ ಎರಡೂ ಸಮುದಾಯ ಮುಖ್ಯ ಎಂದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್.

ಬೆಳಗಾವಿ,ಡಿಸೆಂಬರ್,18,2021(www.justkannada.in):  ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ವಿರೂಪಗೊಳಿಸಿ ಪುಂಡಾಟ ಮೆರೆದಿರುವ ಎಂಇಎಸ್  ವಿರುದ್ಧ ರಾಜ್ಯದಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗಿದ್ದು, ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ.  ಈ ಮಧ್ಯೆ ಇತ್ತ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನನಗೆ ಎರಡೂ ಸಮುದಾಯಗಳು ಮುಖ್ಯ ಎಂದಿದ್ದಾರೆ.

ಈ ಘಟನೆ ಕುರಿತು ಮಾತನಾಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್,  ಶಿವಾಜಿ ಮಹಾರಾಜರ ಪ್ರತಿಮೆ ಧ್ವಂಸ ಮಾಡಿದ್ರು, ಮತ್ತೊಂದೆಡೆ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆ ಧ್ವಂಸ ಮಾಡಿದ್ರು. ಯಾಕೆ ಈ ರೀತಿ ಮಾಡ್ತಿದ್ದಾರೋ ಗೊತ್ತಿಲ್ಲ. ರಾತ್ರೋ ರಾತ್ರಿ ಈ ರೀತಿ ಘಟನೆ ಖಂಡನೀಯ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.congress MLA- Lakshmi Hebbalkar - His Family-8 members - Corona Positive

ನಾನು 2 ಸಮುದಾಯದ ಜತೆ ಮಾತನಾಡಿದ್ದೇನೆ. ನನಗೆ ಎರಡು ಸಮುದಾಯ ಮುಖ್ಯ.  ನಾವು ಭಾರತ ದೇಶದಲ್ಲಿದ್ದೇವೆ. ನಾವೆಲ್ಲರೂ ಒಗ್ಗಟ್ಟಿನಿಂದ ಇರಬೇಕು. ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

Key words: distortion –statue-Sangolli rayanna-MLA-Lakshmi Hebbalkar.