ಗೂಂಡಾಗಿರಿ ಮೂಲಕ ಆರ್.ಆರ್ ನಗರ ಗೆಲ್ಲಲು ಡಿಕೆಶಿ ಯತ್ನ- ಸಂಸದೆ ಶೋಭಾ ಕರಂದ್ಲಾಜೆ ಆರೋಪ…

ಮೈಸೂರು,ಅಕ್ಟೋಬರ್,24,2020(www.justkannada.in):  ಆರ್.ಆರ್ ನಗರ ಉಪಚುನಾವಣಾ ಕಣ ರಂಗೇರಿದ್ದು ಮೂರು ಪಕ್ಷದ ನಾಯಕರು ತಮ್ಮ ಅಭ್ಯರ್ಥಿ ಪರ ಪ್ರಚಾರಕ್ಕಿಳಿದಿದ್ದಾರೆ. ಈ ನಡುವೆ ಕೆಪಿಸಿಸಿ ಅಧ್ಯಕ್ಷ ಡಿ.ಕೆಶಿವಕುಮಾರ್ ಗೂಂಡಾಗಿರಿ ಮೂಲಕ ಆರ್.ಆರ್ ನಗರ ಉಪಚುನಾವಣೆ ಗೆಲ್ಲಲು ಮುಂದಾಗಿದ್ದಾರೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.jk-logo-justkannada-logo

ಮೈಸೂರಿನಲ್ಲಿ ಇಂದು ಮಾತನಾಡಿದ ಸಂಸದ ಶೋಭಾ ಕರಂದ್ಲಾಜೆ, ಡಿ.ಕೆ ಶಿವಕುಮಾರ್ ಗೂಂಡಾ ರಾಜಕಾರಣಿ. ಗೂಂಡಾಗಿರಿ ಮೂಲಕ ಆರ್.ಆರ್ ನಗರ ಗೆಲ್ಲಲು ಡಿಕೆ ಶಿವಕುಮಾರ್ ಯತ್ನಿಸುತ್ತಿದ್ದಾರೆ. ಕಾನೂನು ಸುವ್ಯವಸ್ಥೆ ಹದಗೆಡಿಸಲು ಯತ್ನಿಸುತ್ತಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ ಎಂದು ಹೇಳಿದರು.dk-shivakumar-attempts-win-rr-nagar-by-election-mysore-mp-shobha-karandlaje

ಚುನಾವಣೆ ಪಾರದರ್ಶಕವಾಗಿ ನಡೆಯಬೇಕು. ಯಾವುದೇ ಅಕ್ರಮ ನಡೆಯಲು ಅವಕಾಶ ನೀಡಬಾರದು ಎಂದು ಶೋಭಾಕರಂದ್ಲಾಜೆ ಮನವಿ ಮಾಡಿದರು.

Key words: dk shivakumar-attempts – win- RR nagar—by election-mysore-MP- Shobha Karandlaje