ಕಾಂಗ್ರೆಸ್ ನಾಯಕರಿಗೆ ಉದ್ಯೋಗವಿಲ್ಲ ಎಂದ ಸಚಿವ ಕೆ.ಎಸ್ ಈಶ್ವರಪ್ಪಗೆ ಡಿಕೆ ಶಿವಕುಮಾರ್ ತಿರುಗೇಟು.

ಬೆಂಗಳೂರು,ಫೆಬ್ರವರಿ,28,2022(www.justkannada.in): ಕಾಂಗ್ರೆಸ್ ನಾಯಕರಿಗೆ ಉದ್ಯೋಗವಿಲ್ಲ ಎಂದು ಹೇಳಿಕೆ ನೀಡಿದ ಸಚಿವ ಕೆ.ಎಸ್ ಈಶ್ವರಪ್ಪಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿದ ಡಿ.ಕೆ ಶಿವಕುಮಾರ್, ಸಚಿವ ಈಶ್ವರಪ್ಪ ಹೇಳಿದಂತೆ ನಮಗೆ ಉದ್ಯೋಗವಿಲ್ಲ.  ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವುದಾಗಿ ಹೇಳಿದ್ದರು. ಹೀಗಾಗಿ ನಾವು ಜನರಿಗೆ ಉದ್ಯೋಗ ಕೊಡಿಸಲು ಹೋರಾಟ ಮಾಡುತ್ತಿದ್ದೇವೆ. ನಾವು ಮಾಡುವ ಕೆಲಸವನ್ನ ಜನ ನೋಡುತ್ತಿದ್ದಾರೆ. ಉರಿ ಬಿಸಿಲಿನಲ್ಲಿ  ಪಾದಯಾತ್ರೆ ಮಾಡುತ್ತಿದ್ದೇವೆ. ಸಚಿವ ಈಶ್ವರಪ್ಪಗೆ ಸ್ವಲ್ಪ ತೊಂದರೆ ಇದೆ  ಮೆಂಟಲ್ ಆಸ್ಪತ್ರೆಗೆ ಸೇರಿಸಲು ಬೆಡ್ ಹುಡುಕುತ್ತಿದ್ದೇನೆ . ನಿಮಾನ್ಸ್ ಇಲ್ಲ ಅಂದರೇ ಬೇರೆ ಆಸ್ಪತ್ರೆ ನೋಡೋಣಾ ಎಂದು ಟಾಂಗ್ ನೀಡಿದರು.

ನಮಗೆ ಪಾದಯಾತ್ರೆಗೆ ಅನುಮತಿ ನೀಡದಿದ್ದರೂ ಪಾದಯಾತ್ರೆ ನಡೆಸುತ್ತೇವೆ.  ನ್ಯಾಷನಲ್ ಕಾಲೇಜು ಮೈದಾನದಲ್ಲಿ ಅನುಮತಿ ಸಿಕ್ಕಿದೆ.  ಕೋವಿಡ್ ನಿಯಮ ಗಮನದಲ್ಲಿಟ್ಟುಕೊಂಡು ಹೋರಾಟ ಮಾಡುತ್ತೇವೆ ಎಂದರು.

Key words: DK Shivakumar – Minister-KS Eshwarappa – Congress