ಚುನಾವಣೆ ಬಹಳ ದೂರವಿದೆ ಎಂಬ ತಾತ್ಸಾರ ಬೇಡ : ಬಿ.ಎಲ್.ಸಂತೋಷ ಸೂಚನೆ

ಬೆಂಗಳೂರು, ಆಗಸ್ಟ್, 23, 2020(www.justkannada.in) ; ಚುನಾವಣೆ ಬಹಳ ದೂರವಿದೆ ಎಂಬ ತಾತ್ಸಾರ ಬೇಡ. ಪಕ್ಷ ಸಂಘಟನೆಗೆ ಒತ್ತು ಕೊಡಿ. ಇಂದಿನಿಂದಲೇ ಸಂಘಟನೆ ಚುರುಕುಗೊಳಿಸಿ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನೆ ಪ್ರಧಾನ ಕಾರ್ಯದರ್ಶಿ  ಬಿ.ಎಲ್.ಸಂತೋಷ್ ಸೂಚಿಸಿದ್ದಾರೆ.

Don't-neglat-election-too-far: b.l.santhosh-notice

ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಯುವ ಮೋರ್ಚಾ ಮತ್ತು ಎಸ್ಸಿ ಮೋರ್ಚಾ ಅಧ್ಯಕ್ಷರ ಜೊತೆಗೆ ಪಕ್ಷ ಸಂಘಟನೆ ಸಂಬಂಧ ನಡೆದ ಸಭೆಯಲ್ಲಿ ಈ ಕುರಿತು ಸೂಚನೆ ನೀಡಿದರು.

jk-logo-justkannada-logo

ಮೋರ್ಚಾ ಅಧ್ಯಕ್ಷರು ಸಕ್ರೀಯರಾಗಿ ;

ಪಕ್ಷದ ಅಧ್ಯಕ್ಷರಷ್ಟೇ ರಾಜ್ಯಾದ್ಯಂತ ಪ್ರವಾಸ ಮಾಡಿದರೆ ಸಾಲದು, ಉಪಾಧ್ಯಕ್ಷರು ಮತ್ತು ಎಲ್ಲ ಮೋರ್ಚಾ ಅಧ್ಯಕ್ಷರು ಸಕ್ರೀಯರಾಗಿ ಕೆಲಸ ಮಾಡಬೇಕು ಎಂದು ಹೇಳಿದರು.

ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಗಲಭೆಯ ಹಿಂದೆ ಕಾಂಗ್ರೆಸ್ ನಾಯಕರ ಕೈವಾಡವಿದೆ. ಕೊರೊನಾ ನಿಯಂತ್ರಣದಲ್ಲಿ ಸರಕಾರ ಸಫಲವಾಗಿದೆ. ಈ ಎಲ್ಲ ವಿಚಾರಗಳನ್ನು ಇಟ್ಕೊಂಡು ರಾಜ್ಯ ಸುತ್ತುವ ಮೂಲಕ ಪಕ್ಷ ಸಂಘಟನೆ ಮಾಡಿ ಎಂದು ಸಲಹೆ ನೀಡಿದ್ದಾರೆ.

Key words :Don’t-neglat-election-too-far: b.l.santhosh-notice