ಶಿವಸೇನೆ ಸಂಸದ ಸಂಜಯ್ ರಾವತ್ ಗೆ ಇಡಿ ಸಮನ್ಸ್.

kannada t-shirts

ಮುಂಬೈ,ಜೂನ್,27,2022(www.justkannada.in): ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟಿನ ನಡುವೆಶಿವಸೇನಾ ನಾಯಕ, ಸಂಸದ ಸಂಜಯ್​ ರಾವತ್​ ಗೆ ಜಾರಿ ನಿರ್ದೇಶನಾಲಯ  ಶಾಕ್ ನೀಡಿದ್ದು ನಾಳೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್​ ಜಾರಿ ಮಾಡಿದೆ.

ಪತ್ರಾ ಬಡಾವಣೆ ಅಭಿವೃದ್ಧಿಯಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಜ್ಯಸಭೆ ಸದಸ್ಯ ಸಂಜಯ್  ರಾವತ್ ​ಗೆ ಸಮನ್ಸ್​ ಜಾರಿ ಮಾಡಿರುವ ಇಡಿ, ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. MHADA ನ 47 ಎಕರೆ ಜಾಗಕ್ಕೆ ಸಂಬಂಧಿಸಿದಂತೆ ಉದ್ಯಮಿ ಪ್ರವೀಣ್​ ಜತೆ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪ ಸಂಜಯ್​ ರಾವತ್​ ಮೇಲಿದೆ.  ಭೂ ಅಭಿವೃದ್ಧಿ ಹಗರಣದಲ್ಲಿ ರಾವತ್​ಗೆ ಸಂಬಂಧಿಸಿದ ಆಸ್ತಿಯನ್ನು ಜಪ್ತಿ  ಮಾಡಲಾಗಿದೆ.

ಅತ್ತ ಮಹಾ ಆಘಾಡಿ ಸರ್ಕಾರಕ್ಕೆ ರೆಬಲ್​ ಶಾಸಕರು ಬೆಂಬಲ ಹಿಂಪಡೆದಿದ್ದು, ಉದ್ಧವ್​ ಠಾಕ್ರೆ ನೇತೃತ್ವದ ಸರ್ಕಾರ ಪತನದತ್ತ ಸಾಗಿದೆ.  ಈ ನಡುವೆ ಇಡಿ ಸಮನ್ಸ್​ ಜಾರಿ ಹಿನ್ನೆಲೆ ಸಂಜಯ್ ರಾವತ್ ಗೆ​  ಸಂಕಷ್ಟ ಎದುರಾಗಿದೆ.

Key words: ED -summons -Shiv Sena- MP- Sanjay Rawat

 

website developers in mysore