ಪಂಜಾಬ್ ನಲ್ಲಿ ನಮ್ಮ ತಪ್ಪಿನಿಂದ ಅಧಿಕಾರ ಕಳೆದುಕೊಂಡವು- ಮಾಜಿ ಸಿಎಂ ಸಿದ್ಧರಾಮಯ್ಯ.

kannada t-shirts

ಬೆಂಗಳೂರು,ಮಾರ್ಚ್,10,2022(www.justkannada.in):  ಐದು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು ಪಂಜಾಬ್ ನಲ್ಲಿ ನಮ್ಮ ತಪ್ಪಿನಿಂದ ಅಧಿಕಾರ ಕಳೆದುಕೊಂಡವು ಎಂದು  ಮಾಜಿ ಸಿಎಂ ಸಿದ್ಧರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಸಿದ್ದರಾಮಯ್ಯ, ಉತ್ತರಾಖಂಡ್ ಹಾಗೂ ಗೋವಾದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ನಿರೀಕ್ಷೆ ಇತ್ತು. ಯುಪಿಯಲ್ಲಿ ನಾವು ನಿರೀಕ್ಷೆ ಮಾಡಿರಲಿಲ್ಲ. ಪಂಜಾಬ್ ನಲ್ಲಿ ನಾವು ಅಧಿಕಾರದಲ್ಲಿದ್ದೆವು. ಆದರೆ ಈ ಬಾರಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂಬ ನಿರೀಕ್ಷೆ ಇತ್ತು. ನಮ್ಮ ತಪ್ಪಿನಿಂದಾಗಿ ಪಂಜಾಬ್ ನಲ್ಲಿ ಅಧಿಕಾರ ಕಳೆದುಕೊಂಡಿದ್ದೇವೆ ಎಂದರು.

ಪಂಜಾಬ್ ನಲ್ಲಿ ಅಧಿಕಾರಕ್ಕೆ ಬಂದಿರುವುದು ಆಮ್ ಆದ್ಮಿ ಪಕ್ಷ, ಬಿಜೆಪಿಯಲ್ಲ. ಹಾಗಾಗಿ ಈ ಚುನಾವಣೆ ಫಲಿತಾಂಶದಿಂದ ನಾವು ಧೈರ್ಯ ಕಳೆದುಕೊಳ್ಳುವ ಅಗತ್ಯವಿಲ್ಲ. ಅಧಿಕಾರ ಇದ್ದ ರಾಜ್ಯದಲ್ಲಿ ಬಿಜೆಪಿ ಗೆದ್ದಿದೆ ಅಷ್ಟೆ. ಹಾಗಂತ ಬಹಳ ಜಂಬ ಪಡುವ ಅಗತ್ಯವಿಲ್ಲ ಎಂದು ಹೇಳಿದರು.

Key words: election-result-siddaramaiah

website developers in mysore