”ಜಿಪಂ,ತಾಪಂ ಚುನಾವಣೆಯಲ್ಲಿ ಗ್ರಾಪಂ ಯಶಸ್ಸು ಮುಂದುವರಿಯಲಿ” : ಸಿಎಂ ಬಿ.ಎಸ್.ಯಡಿಯೂರಪ್ಪ…!

ಶಿವಮೊಗ್ಗ,ಜನವರಿ,03,2021(www.justkannada.in) : ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿನ ಬಿಜೆಪಿ ಅಭೂತಪೂರ್ವ ಯಶಸ್ಸು ಸದ್ಯದಲ್ಲೇ ನಡೆಯುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಯಲ್ಲೂ ಮುಂದುವರಿಯಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

jk-logo-justkannada-mysoreಬಿಜೆಪಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಫಲಿತಾಂಶ ನಮ್ಮ ಪಕ್ಷದ ಕಾರ್ಯಕರ್ತರಲ್ಲಿ ಉಲ್ಲಾಸ, ಸಮಾಧಾನ ಮತ್ತು ತೃಪ್ತಿ ತಂದಿದೆ. ಸದ್ಯದಲ್ಲೇ ಜಿಪಂ, ತಾಪಂ ಚುನಾವಣೆ ನಡೆಯಲಿದ್ದು, ಇದರಲ್ಲಿಯೂ ಯಶಸ್ಸು ಮುಂದುವರಿಯಬೇಕೆಂದು ಎಂದರು.

ಹಠ, ಛಲ ಮತ್ತು ಗುರಿ ಇದ್ದು ಗುರಿ ಮುಟ್ಟುವ ದಾರಿ ಗೊತ್ತಿರಬೇಕು. ಆಗ ಮಾತ್ರವೇ ನಿರೀಕ್ಷಿತ ಯಶಸ್ಸು ಗಳಿಸಲು ಸಾಧ್ಯ ಎಂದವರು ಹೇಳಿದರುಇನ್ನೆರಡು ವರ್ಷಗಳ ನಂತರ ಬರುವ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನವನ್ನು ಪಡೆಯಬೇಕು. ಅದಕ್ಕಾಗಿ ಈಗಿನಿಂದಲೇ ನಮ್ಮೆಲ್ಲಾ ಪದಾಕಾರಿಗಳು ಮತ್ತು ಕಾರ್ಯಕರ್ತರು ಕಾರ್ಯಪ್ರವೃತ್ತ ರಾಗಬೇಕು ಎಂದು ಹೇಳಿದರು.

elections,GP and TAP,Grappam, Success,Continue,CM B.S. Yeddyurappa ...!

 

ಜನಸಂಘ ಕಾಲದ ನಮ್ಮ ಹಿರಿಯರ ಅಪೇಕ್ಷೆಯಂತೆ ರಾಜ್ಯವನ್ನು ಮಾದರಿ ರಾಜ್ಯವನ್ನಾಗಿಸಿ ಅನ್ನದಾತ ರೈತರನ್ನು ಸ್ವಾವಲಂಬಿಯನ್ನಾಗಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ತಿಳಿಸಿದ್ದಾರೆ.

key words :  elections-GP and TAP-Grappam Success-Continue-CM B.S. Yeddyurappa …!