ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಪ್ರೇಕ್ಷಕರಿಗೆ ಅವಕಾಶ ಬಗ್ಗೆ ತಜ್ಞರ ಜತೆ ಚರ್ಚಿಸಿ ತೀರ್ಮಾನ- ಸಿಎಂ ಭರವಸೆ.

ಬೆಂಗಳೂರು,ಜನವರಿ,31,2022(www.justkannada.in):  ಕೊರೋನಾ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೆಲ ಕೋವಿಡ್ ನಿಯಮಗಳನ್ನ ಸಡಿಲಗೊಳಿಸಲಾಗಿದೆ. ಈ ಮಧ್ಯೆ ಚಿತ್ರಮಂದಿರಗಳಲ್ಲಿ  ಶೇ.50ರಷ್ಟು ಪ್ರೇಕ್ಷಕರಿಗೆ ಮಾತ್ರ ಅನುಮತಿ ಎಂಬ ನಿಯಮ ಮುಂದುವರೆಸಲಾಗಿತ್ತು ಈ ಹಿನ್ನೆಲೆಯಲ್ಲಿ ಇಂದು ಫಿಲಂ ಚೇಂಬರ್ ಸದಸ್ಯರು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಭೇಟಿಯಾಗಿ ಚರ್ಚಿಸಿದರು.

ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್ ಅವರ ನೇತೃತ್ವದಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಭೇಟಿಯಾಗಿ ಚಿತ್ರಮಂದಿರಗಳಲ್ಲೂ ಶೇ.100 ರಷ್ಟು ಪ್ರೇಕ್ಷಕರಿಗೆ ಅನುಮತಿ ನೀಡವಂತೆ ಮನವಿ ಮಾಡಿದರು. ಈ ಸಂಬಂಧ ಸಿಎಂ ಬೊಮ್ಮಾಯಿ ತಜ್ಞರ ಜತೆ ಚರ್ಚಿಸಿ ತೀರ್ಮಾನಿಸುವುದಾಗಿ ಭರವಸೆ ನೀಡಿದ್ದಾರೆ.

ಸಿಎಂ ಭೇಟಿ ಬಳಿಕ ಮಾತನಾಡಿದ ಫಿಲಂ ಚೇಂಬರ್ ಅಧ್ಯಕ್ಷ ಜೈರಾಜ್, ಚಿತ್ರಮಂದಿರಗಳಲ್ಲೂ ಶೇ.100 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡುವಂತೆ ಕೋರಿದ್ದೇವೆ. ಈ ಬಗ್ಗೆ ತಜ್ಞರ ಜತೆ ಚರ್ಚಿಸಿ ಅಂತಿಮ ನಿರ್ಧಾರ ಮಾಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ಸಿಎಂ  ಬೊಮ್ಮಾಯಿ ಸಭೆಯಲ್ಲಿ ಪೂರ್ಣ ಮಾಹಿತಿ ನಿಡುವಂತೆ ಕೇಳಿದರು. ಸಿಎಂ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.

Key words: experts -film theatres-CM –Basavaraj bommai