ಹಳ್ಳಿಗಳಲ್ಲಿ ಸೋಂಕು ತೀವ್ರಗೊಳ್ಳಲು ಸರ್ಕಾರದ ವೈಪಲ್ಯ ಕಾರಣ- ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿ…

ಬೆಂಗಳೂರು,ಮೇ,,21,2021(www.justkannada.in): ರಾಜ್ಯದಲ್ಲಿ ಹಳ್ಳಿ ಹಳ್ಳಿಗಳಲ್ಲಿ ಕೊರೋನಾ ಸೋಂಕು ತೀವ್ರಗೊಳ್ಳುತ್ತಿದೆ. ಇದಕ್ಕೆ ರಾಜ್ಯ ಸರ್ಕಾರದ ವೈಪಲ್ಯ ಕಾರಣ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಆರೋಪಿಸಿದ್ದಾರೆ.jk

ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ,  ಗ್ರಾಮೀಣ ಭಾಗದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದೆ. ವೈದ್ಯಕೀಯ ವ್ಯವಸ್ಥೆ ಸರಿ ಇಲ್ಲ. ಈ ಸರ್ಕಾರ ಸುಳ್ಳು ಹೇಳುವ ಕೆಲಸ ಮಾಡುತ್ತಿದೆ. ಸತ್ತವರ ಅಂಕಿ ಅಂಶದ ಬಗ್ಗೆ ಸುಳ್ಳು ಹೇಳುತ್ತಿದ್ದಾರೆ. ಇದು ಜನದ್ರೋಹಿ ಸರ್ಕಾರ, ದುಷ್ಟ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.failure-government-corona-villages-former-cm-siddaramaiah

ನಾನು ಸರ್ಕಾರಕ್ಕೆ 12 ಪತ್ರಗಳನ್ನ ಬರೆದೆ ಆದರೆ ಇದಕ್ಕೆ ಒಂದೂ ಉತ್ತರ ಬರಲಿಲ್ಲ. ಹಾಗೆಯೇ ಕೇಂದ್ರದಲ್ಲೂ ಇದೇ ಪರಿಸ್ಥಿತಿ ಇದೆ. ಯಥಾ ರಾಜ , ತಥಾಪ್ರಜಾ ಎಂದು ಸಿದ್ದರಾಮಯ್ಯ ಹರಿಹಾಯ್ದರು.

Key words: failure – government – corona-villages- Former CM -Siddaramaiah