ಕಿಡಿಗೇಡಿಗಳ ವದಂತಿಗಳಿಗೆ ರೈತರು ಕಿವಿಗೊಡಬಾರದು-ಕೃಷಿ ಸಚಿವ ಬಿ‌.ಸಿ.ಪಾಟೀಲ್ ಮನವಿ

ಹಾವೇರಿ,ಅಕ್ಟೋಬರ್.6,2020(www.justkannada.in): ಕೆಲವು ಕಿಡಿಗೇಡಿಗಳು ರೈತರನ್ನು ಯೋಜನೆಯ ಹೆಸರಿನಲ್ಲಿ ದಾರಿತಪ್ಪಿಸುವ ಕೆಲಸ ಮಾಡುತ್ತಿದ್ದು, ಇಲ್ಲಸಲ್ಲದ ವದಂತಿ ಸುಳ್ಳುಸುದ್ದಿಗಳಿಗೆ ಕಿವಿಗೊಡಬಾರದು ಎಂದು ಕೃಷಿ ಸಚಿವರೂ ಆಗಿರುವ ಹಿರೇಕೆರೂರು ಮತಕ್ಷೇತ್ರದ ಶಾಸಕ ಬಿ.ಸಿ.ಪಾಟೀಲ್ ಮನವಿ ಮಾಡಿದ್ದಾರೆ.jk-logo-justkannada-logo

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ಸಿ.ಪಾಟೀಲ್, ಕ್ಷೇತ್ರದಲ್ಲಿ ಅಭಿವೃದ್ಧಿ ಪಥದತ್ತ ಸಾಗುತ್ತಿದ್ದು,ರೈತರ ಹೆಸರಿನಲ್ಲಿ ಕೆಲವರು ಅನಾವಶ್ಯಕ ಧರಣಿ ನಡೆಸುತ್ತಿರುವುದು ವಿಷಾದನೀಯ. ನೈಸರ್ಗಿಕವಾದ ನೆಲ ಜಲದ ಮೇಲೆ ಯಾರಿಗೂ ಹಕ್ಕಿರುವುದಿಲ್ಲ. ಹಿರೆಕೆರೂರಿನಿಂದ ಶಿಕಾರಿಪುರಕ್ಕೆ ಹೋಗುವ ಉಡುಗಣಿ-ತಾಳಗುಂದ-ಹೊಸೂರು ಏತ ನೀರಿನ ಯೋಜನೆಯಲ್ಲಿ ಹಿರೆಕೆರೂರಿನ ವರಹ ನಿಟ್ನೇಗಿಲು, ಬನ್ನಟ್ಟಿ,ಬಳ್ಳೂರು, ಚಿಕ್ಕೇರೂರು, ಯಲ್ಲಾಪುರ ಸೇರಿದಂತೆ ತಾಲೂಕಿನ ಏಳು ಕೆರೆಗಳು ಯೋಜನೆಯಿಂದ ತುಂಬುತ್ತವೆ. ಪೈಪ್ಲೈನ್ ಮೂಲಕ ನೀರು ಹಾಯಿಸಲಾಗುತ್ತಿದ್ದು, ಕೆಲವು ಕಿಡಿಗೇಡಿಗಳು ರೈತರ ಹೆಸರಿನಲ್ಲಿ ದುರುದ್ದೇಶಪೂರಕವಾಗಿ ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ಯಾವುದಾದರೊಂದು ನೀರಾವರಿ ಯೋಜನೆ ಕಾರ್ಯಗತವಾಗಬೇಕಾದರೆ ಹಲವಾರು ಸ್ಥಳಗಳಿಂದ ಹಾದು ಹೋಗಬೇಕಾಗುತ್ತದೆ.ಜನರು ವಾಸ್ತವಾಂಶವನ್ನು ಅರಿಯಬೇಕು. ಅಲ್ಲದೇ ಉಡುಗಣಿ-ತಾಳಗುಂದ-ಹೊಸೂರು ಏತ ನೀರಿನ ಯೋಜನೆಯಿಂದ ರೈತರಿಗಾಗಲೀ ಜನರಿಗಾಗಲೀ ಯಾವುದೇ ತೊಂದರೆಯಾಗದು.ಯೋಜನೆಯಿಂದ ಹಿರೆಕೆರೂರು ತಾಲೂಕಿನ ಕೆರೆಗಳು ತುಂಬಿ ಅನುಕೂಲವೇ ಆಗಲಿದೆ ಎಂದು ಸ್ಪಷ್ಟಪಡಿಸಿದರು.

ಹಿರೆಕೆರೂರು ತಾಲೂಕಿನ ಮಡ್ಲೂರು ಏತನೀರಾವರಿ ಯೋಜನೆ ಹಾನಗಲ್ ತಾಲೂಕಿನ ಹೊಂಕಣದಿಂದ ಬರುತ್ತಿದೆ.ಸರ್ವಜ್ಞ ಏತನೀರಾವರಿ ಯೋಜನೆ ಉಕ್ಕಡಗತ್ರಿ ರಾಣೆಬೆನ್ನೂರು ಗಡಿಯಿಂದ ಬರುತ್ತಿದೆ.ಹಿರೆಕೆರೂರು ಪಟ್ಟಣಕ್ಕೆ ಕುಡಿಯುವ ನೀರನ್ನು ತುಮ್ಮಿನಕಟ್ಟಿಯಿಂದ ಬರುತ್ತಿದೆ.ಹೀವೆ ಬೇರೆ ತಾಲೂಕಿನಿಂದ ಹಿರೆಕೆರೂರಿಗೆ ಮೂರು ಯೋಜನೆಗಳು ಬರುತ್ತಿವೆ.ವಿನಾಕಾರಣ ರೈತರನ್ನು ದಾರಿತಪ್ಪಿಸುವುದರಿಂದ ಯಾರಿಗೇನು ಲಾಭವಾಗುತ್ತಿದೆಯೋ ಗೊತ್ತಿಲ್ಲ.ನೀರಾವರಿ ಯೋಜನೆಗಳನ್ನು ನಿಲ್ಲಿಸಲು ಸಾಧ್ಯವಿಲ್ಲ.ಇಂತಹವರ ಮಾತಿಗೆ ಅಪಪ್ರಚಾರಕ್ಕೆ ರೈತಬಾಂಧವರು ಯಾವುದೇ ಕಾರಣಕ್ಕೆ ಬೆಲೆಕೊಡಬಾರದು.ರೈತರಿಗೆ ಸರ್ಕಾರ ಯಾವುದೇ ರೀತಿ ಅನ್ಯಾಯ ಮಾಡುವುದಿಲ್ಲ‌.ವದಂತಿಗಳಿಗೆ ಕಿವಿಗೊಡಬಾರದೆಂದು ಬಿ.ಸಿ.ಪಾಟೀಲ್ ಮನವಿ ಮಾಡಿದರು.farmers-not-listen-rumors-agriculture-minister-bc-patil

ಲೋಕೋಪಯೋಗಿ ಇಲಾಖೆಗೆ ಧನ್ಯವಾದ ಸಲ್ಲಿಸಿದ ಬಿ.ಸಿ.ಪಾಟೀಲ್…

ಕೃಷಿ ಇಲಾಖೆಯಲ್ಲಿನ ಅಭಿವೃದ್ಧಿ, ರೈತಪರ ಯೋಜನೆಗಳ ಜೊತೆಜೊತೆಗೆ ಮತಕ್ಷೇತ್ರ ಹಿರೇಕೆರೂರಿನ ಸರ್ವಾಂಗೀಣ ಅಭಿವೃದ್ಧಿಗೂ ಸಹ ಒತ್ತು ಕೊಟ್ಟು ದುಡಿಯುತ್ತಿರುವ ಸಚಿವ ಬಿ.ಸಿ.ಪಾಟೀಲರ ಶ್ರಮದ ಫಲವಾಗಿ ಸರ್ಕಾರ ಹಿರೇಕೂರು ಪಟ್ಟಣದಲ್ಲಿ ಪ್ರವಾಸಿಮಂದಿರ ನಿರ್ಮಾಣ ಕಾಮಗಾರಿಗೆ 300 ಲಕ್ಷ ಹಾಗೂ ರಟ್ಟಿಹಳ್ಳಿ ಪ್ರವಾಸಿಮಂದಿರ ನಿರ್ಮಾಣ ಕಾಮಗಾರಿಗೆ 200 ಲಕ್ಷ ರೂ.ಗಳಿಗೆ ಸರ್ಕಾರ ಅನುಮೋದನೆ ನೀಡಿದ್ದು, ಇದಕ್ಕಾಗಿ ಲೋಕೋಪಯೋಗಿ ಇಲಾಖೆ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಸಚಿವರು ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

Key words: Farmers – not -listen –rumors-Agriculture Minister -BC Patil