“ರೈತರ ಟ್ರಾಕ್ಟರ್ ಪರೇಡ್‌, ಅಹಿತಕರ ಘಟನೆಗಳು ನಡೆದರೆ ಕೇಂದ್ರ ಸರಕಾರವೇ ಹೊಣೆ” : ವಿಪಕ್ಷ ನಾಯಕ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು,ಜನವರಿ,26,2021(www.justkannada.in) : ದೆಹಲಿಯಲ್ಲಿ ನಡೆಯುತ್ತಿರುವ ರೈತರ ಟ್ರಾಕ್ಟರ್ ಪರೇಡ್‌ಗೆ ಸಂಬಂಧಿಸಿದಂತೆ ಅಹಿತಕರ ಘಟನೆಗಳು ನಡೆದರೆ ಅದರ ಹೊಣೆಯನ್ನು ನರೇಂದ್ರಮೋದಿ ಸರ್ಕಾರವೇ ವಹಿಸಿಕೊಳ್ಳಬೇಕಾಗುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.Farmers-Tractor-Parade-unpleasant-events-occur-central-government-responsible-Opposition-leader-Siddaramaiah-Warningನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ರಾಜ್ಯದಲ್ಲಿ ನಡೆಯುತ್ತಿರುವ ರೈತ ಹೋರಾಟವನ್ನು ಪೊಲೀಸರ ಮೂಲಕ ಹತ್ತಿಕ್ಕಲು ಮುಖ್ಯಮಂತ್ರಿ ಬಿ.ಎಸ್.ವೈ ಅವರು ತನ್ನ ರೈತ ವಿರೋಧಿ ನಿಲುವಿಗೆ ತಕ್ಕ ಪ್ರತಿಫಲವನ್ನು ಉಣ್ಣಬೇಕಾಗುತ್ತದೆ ಎಂದು ಹೇಳಿದರು.Farmers-Tractor-Parade-unpleasant-events-occur-central-government-responsible-Opposition-leader-Siddaramaiah-Warning

ರೈತ ಹೋರಾಟಗಾರರ ಆಕ್ರೋಶ ಸ್ಪೋಟಗೊಳ್ಳಲು ಅವಕಾಶ ನೀಡದೆ ಪ್ರಧಾನಿ ನರೇಂದ್ರ ಮೋದಿ ಅವರು ತಕ್ಷಣ ರೈತ ವಿರೋಧಿ ಕಾನೂನುಗಳನ್ನು ವಾಪಸು ಪಡೆಯಬೇಕೆಂದು ಆಗ್ರಹಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

key words : Farmers-Tractor-Parade-unpleasant-events-occur-central-government-responsible-Opposition-leader-Siddaramaiah-Warning