“ರೈತರಿಗಾಗಿ ನಾನು ಜೈಲಿಗೆ ಹೋಗಲು ಸಿದ್ಧ” : ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜನವರಿ,20,2021(www.justkannada.in) : ದೇಶದಲ್ಲಿ ಅರಾಜಕತೆ ಸೃಷ್ಠಿಯಾಗಿದೆ. ಕೃಷಿ ಕಾಯ್ದೆಗಳು ರೈತರಿಗೆ ಮಾರಕವಾಗಿದ್ದು, ಮನುಷ್ಯತ್ವ ಇದ್ದರೆ ಹೋರಾಟ ಹತ್ತಿಕ್ಕಬಾರದು. ರೈತರ ಪರವಾಗಿ ನಾನು ಜೈಲಿಗೆ ಹೋಗಲು ಸಿದ್ಧ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶವ್ಯಕ್ತಪಡಿಸಿದರು.jkಕೃಷಿ ಕಾಯ್ದೆ ವಿರೋಧಿಸಿ ಹಮ್ಮಿಕೊಂಡಿದ್ದ ಫ್ರೀಡಂ ಪಾರ್ಕ್ ನಲ್ಲಿ ರಾಜಭವನ ಮುತ್ತಿಗೆ ಪ್ರತಿಭಟನಾ ರ್ಯಾಲಿಯಲ್ಲಿ ಮಾತನಾಡಿದ ಅವರು, ರೈತರು ಕೇಂದ್ರ ಸರ್ಕಾರ ಕಿತ್ತೊಗೆಯಲು ತೀರ್ಮಾನ ಮಾಡಿದ್ದಾರೆ. ರೈತರ ವಿರುದ್ಧದ ಕಾಯ್ದೆ ಯಾಕೆ ತಂದಿದ್ದೀರಿ?,  58 ದಿನಗಳಿಂದ ರೈತರು ಪ್ರತಿಭಟನೆ ಮಾಡಿದ್ದಾರೆ. ಚಳಿಯಲ್ಲೇ ರೈತರು ಪ್ರತಿಭಟನೆ ಮಾಡ್ತಿದ್ದಾರೆ ಎಂದು ಕಿಡಿಕಾರಿದರು.farmers,jail,Ready,go,Former CM,Siddaramaiahಕೃಷಿ ನೀತಿ ವಿರುದ್ಧ ರೈತರು ಸಿಡಿದೆದ್ದಿದ್ದಾರೆ. ರೈತರು ದಂಗೆ ಏಳಲು ಅವಕಾಶ ಕೊಡಬೇಡಿ. ಕೂಡಲೇ ಕೃಷಿ ಕಾಯ್ದೆಗಳನ್ನು ವಾಪಾಸ್ ಪಡೆಯಿರಿ ಎಂದು ಆಗ್ರಹಿಸಿದ್ದಾರೆ.

key words : farmersjail-Ready-go-Former CM-Siddaramaiah