“ಭಾವನೆ ಕೆರಳಿಸುವಂತಹ ಹೇಳಿಕೆ ನೀಡದಂತೆ ನಿರ್ದೇಶಿಸಲು ಸುಪ್ರೀಂಕೋರ್ಟ್ ಗೆ ಅರ್ಜಿ”

ಬೆಂಗಳೂರು,ಜನವರಿ,18,2021 : ಯಾವುದೇ ರಾಜ್ಯದ ಸಿಎಂ, ಮಂತ್ರಿಗಳು, ಜನಪ್ರತಿನಿಧಿಗಳು ಭಾವನೆ ಕೆರಳಿಸುವಂತಹ ಹೇಳಿಕೆ ನೀಡದಂತೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸುವಂತೆ ಗಡಿ ರಕ್ಷಣಾ ಆಯೋಗದ ಅಧ್ಯಕ್ಷ ನ್ಯಾ.ಕೆ.ಎಲ್.ಮಂಜುನಾಥ್ ಸೂಚನೆ ನೀಡಿದ್ದಾರೆ.feeling-irritating-making-statement-direct-Supreme-Court-Apply 

ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ಗಡಿ ವಿವಾದಿತ ಹೇಳಿಕೆ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳು ಸೇರಿದಂತೆ ಅನೇಕರು ಹೇಳಿಕೆಗಳನ್ನು ನೀಡುತ್ತಿದ್ದು, ಭಾವನೆ ಕೆರಳಿಸುವಂತಹ ಹೇಳಿಕೆ ನೀಡದಂತೆ ನಿರ್ದೇಶಿಸುವಂತೆ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸುವಂತೆ ಸುಪ್ರೀಂ ನಲ್ಲಿರುವ ವಕೀಲರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

key words : feeling-irritating-making-statement-direct-Supreme-Court-Apply