ಹೊತ್ತಿ ಉರಿಯುತ್ತಿರುವ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

kannada t-shirts

ಮೈಸೂರು,ನವೆಂಬರ್,07,2020(www.justkannada.in) :  ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಹೊಸಕೋಟೆ ಗ್ರಾಮದ ಸಮೀಪ ಬೆಂಕಿ ಹೊತ್ತಿಕೊಂಡು ಉರಿಯುವ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ.kannada-journalist-media-fourth-estate-under-loss

ಗ್ರಾಮಸ್ಥರಿಂದ ಪೊಲೀಸರಿಗೆ ಮಾಹಿತಿ

ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಹೊಸಕೋಟೆ ಗ್ರಾಮದ ರಸ್ತೆಯಲ್ಲಿ ಮೃತದೇಹ ಬಿದ್ದಿದ್ದು, ಶವವು ಹೊತ್ತಿ ಉರಿಯುತ್ತಿರುವುದನ್ನು ನೋಡಿದ ಗ್ರಾಮಸ್ಥರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪಿರಿಯಾಪಟ್ಟಣ ಪೊಲೀಸರು ಈ ಕುರಿತು ಪರಿಶೀಲನೆ ನಡೆಸಿದ್ದಾರೆ.

ಮಹಿಳೆಯ ಗುರುತು ಪತ್ತೆಯಾಗಿಲ್ಲ

ಮಹಿಳೆಯ ಗುರುತು ಪತ್ತೆಯಾಗಿಲ್ಲ. ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದು, ಮಹಿಳೆಯನ್ನು ಕೊಲೆ ಮಾಡಿ ಬಳಿಕ ರಸ್ತೆ ಬದಿಯಲ್ಲಿ ಸುಟ್ಟು ಹಾಕಿರುವ ಶಂಕೆ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ. Finding,corpse,woman,fiery,state

key words : Finding-corpse-woman-fiery-state

website developers in mysore