ಐತಿಹಾಸಿಕ ಜಂಬೂ ಸವಾರಿ ಮುಕ್ತಾಯ: ಚಿನ್ನದ ಅಂಬಾರಿ ಹೊತ್ತು ಗಾಂಭೀರ್ಯ ಹೆಜ್ಜೆ ಹಾಕಿದ ಕ್ಯಾಪ್ಟನ್ ಅಭಿಮನ್ಯು…

ಮೈಸೂರು,ಅಕ್ಟೋಬರ್,26,2020(www.justkannada.in):   ಕೊರೋನಾ ಹಿನ್ನೆಲೆ ಈ ಬಾರಿ ಸರಳ ಸಾಂಪ್ರದಾಯಿಕ ದಸರಾ ಆಚರಣೆ ಮಾಡಲಾಗುತ್ತಿದ್ದು ಇಂದು ಐತಿಹಾಸಿಕ ಜಂಬೂ ಸವಾರಿ ಮೆರವಣಿಗೆಗೆ ಸಿಎಂ ಬಿಎಸ್ ಯಡಿಯೂರಪ್ಪ ಚಾಲನೆ ನೀಡಿದರು.mysore dasara-CM BS Yeddyurappa- Jamboo savari - parade.

ಚಾಲನೆ ನೀಡಿದ ಬಳಿಕ ಇದೇ ಮೊದಲ ಬಾರಿಗೆ ಕ್ಯಾಪ್ಟನ್ ಅಭಿಮನ್ಯು 750 ಕೆ.ಜಿ ತೂಕದ ಚಿನ್ನದ ಅಂಬಾರಿ ಹೊತ್ತು ಗಾಂಭೀರ್ಯದಿಂದ ಹೆಜ್ಜೆ  ಹಾಕಿದ್ದು, ಅಭಿಮನ್ಯುವಿಗೆ, ವಿಜಯ ಕಾವೇರಿ, ಗೋಪಿ ಸಾಥ್ ನೀಡಿದ್ದಾರೆ. ಕೊರೋನಾ ಹಿನ್ನೆಲೆ ಈ ಬಾರಿ ಅರಮನೆ ಆವರಣಕ್ಕೆ ಜಂಬೂಸವಾರಿ ಸೀಮಿತವಾಗಿತ್ತು. ಹೀಗಾಗಿ 400 ಮೀಟರ್ ನಲ್ಲಿ ಕ್ಯಾಪ್ಟನ್ ಅಭಿಮನ್ಯು ಗಾಂಭೀರ್ಯ ನಡಿಗೆ ಹಾಕಿ ಸಾಗಿದನು.

ನಂತರ ಬಲರಾಮ ದ್ವಾರದ ಬಳಿ  ಸಂಜೆ 4.17 ವೇಳೆಗೆ ಜಂಬೂ ಸವಾರಿ ಮೆರವಣಿಗೆ ಮುಕ್ತಾಯವಾಯಿತು. ಈ ಬಾರಿ 23 ನಿಮಿಷಗಳಿಗಷ್ಟೇ ಜಂಬೂಸವಾರಿ ಸೀಮಿತವಾಗಿತ್ತು. ಇನ್ನು ಈ ಬಾರಿ ಮೈಸೂರು ಜಿಲ್ಲಾ ಪಂಚಾಯಿತಿ ವತಿಯಿಂದ ಕೊರೊನಾ ಜಾಗೃತಿ ಮೂಡಿಸುವ ಸ್ತಬ್ಧಚಿತ್ರ  ಜಂಬೂ ಸವಾರಿಯಲ್ಲಿ ಪ್ರದರ್ಶನಗೊಂಡಿದೆ. Finish - historic – mysore-dasara-jumbo  savari

ಕೋವಿಡ್‌ ನಿಯಂತ್ರಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಕೊರೊನಾ ಯೋಧರ ಸೇವೆ ಸ್ಮರಣೆಗಾಗಿ ಈ ಸ್ತಬ್ಧಚಿತ್ರವನ್ನು ರೂಪಿಸಲಾಗಿತ್ತು.  ಆನೆ ಬಂಡಿ ಸ್ತಬ್ಧಚಿತ್ರ ಮತ್ತೊಂದು ವಿಶೇಷವಾಗಿದೆ. ಅರಮನೆ ವಾದ್ಯಗೋಷ್ಠಿ ಕುರಿತಾದ ಚಿತ್ರವೇ ಆನೆ ಬಂಡಿ. ಈ ಎರಡು ಸ್ತಬ್ಧಚಿತ್ರಗಳು ಮಾತ್ರ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದು ಅಲ್ಲಿ ನೆರೆದಿದ್ದ ಪ್ರೇಕ್ಷಕರು ಕಣ್ತುಂಬಿಕೊಂಡರು.

 

Key words: Finish – historic – mysore-dasara-jumbo  savari