ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ: ವೈದ್ಯ ಪ್ರಾಣಾಪಾಯದಿಂದ ಪಾರು.

kannada t-shirts

ಮೈಸೂರು,ಜನವರಿ,11,2022(www.justkannada.in): ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕಾರಿನಲ್ಲಿದ್ದ ವೈದ್ಯರೊಬ್ಬರು ಪ್ರಾಣಾಪಾಯದಿಂದ ಪಾರಾದ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಗನ್ ಹೌಸ್ ವೃತ್ತದ ಬಳಿ ಈ ಘಟನೆ ನಡೆದಿದೆ. ಕುವೆಂಪು ನಗರದ ವೈದ್ಯ ಭೂಷಣ್ ಎಂಬುವವರಿಗೆ ಸೇರಿದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಾರಿನಲ್ಲಿ ಕೆ.ಆರ್. ಆಸ್ಪತ್ರೆಗೆ ತೆರಳುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದ್ದು ಕೂಡಲೇ ವೈದ್ಯ ಭೂಷಣ್ ಕಾರಿನಿಂದ ಕೆಳಗಿಳಿದ್ದಾರೆ.Sort-circuit-Bank of Baroda-Fire ...!

ಧಗಧಗನೆ ಹೊತ್ತಿ ಉರಿದ ಕಾರು ಸಂಪೂರ್ಣ ಭಸ್ಮವಾಗಿದೆ.  ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ  ಬೆಂಕಿ ನಂದಿಸಿದ್ದಾರೆ. ಬ್ಯಾಟರಿಯಿಂದ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ಸಂಭವಿಸಿದ್ದು, ಐ20 ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ.

Key words: Fire – moving- car-mysore

website developers in mysore