ಅರಣ್ಯ ಇಲಾಖೆ ಆವರಣದಲ್ಲಿ ಬೆಳೆದಿದ್ದ ಶ್ರೀಗಂಧದ ಮರ ಕಳವು…!

ಮೈಸೂರು,ಡಿಸೆಂಬರ್,30,2020(www.justkannada.in) : ಅರಣ್ಯ ಇಲಾಖೆ ಆವರಣದಲ್ಲಿ ಬೆಳೆದಿದ್ದ ಶ್ರೀಗಂಧದ ಮರ ಕಳವು ಮಾಡಲಾಗಿದೆ.

ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ಪಟ್ಟಣದ 1ನೇ ಮುಖ್ಯರಸ್ತೆಯಲ್ಲಿರುವ ಅರಣ್ಯ ಇಲಾಖೆ ಕಾಂಪೌಂಡ್ ಒಳಗೆ ಬೆಳೆದಿದ್ದ ಶ್ರೀಗಂಧದ ಮರವನ್ನು ಕಳವು ಮಾಡಲಾಗಿದೆ.

Forest-Department-premises-Had-grown-Sandalwood-tree-stolen ...!
ಸಾಂದರ್ಭಿಕ ಚಿತ್ರ

ಮರ ಕತ್ತರಿಸುವ ಯಂತ್ರದ ಸಹಾಯದಿಂದ ಗಂಧದ ಮರ ಕತ್ತರಿಸಿದ್ದಾರೆ. ಅರಣ್ಯ ಇಲಾಖೆ ವಸತಿ ಗೃಹದ ಬಳಿಯೇ ಕಳ್ಳತನ ಮಾಡಿದ್ದು, ಒಂದು ತಿಂಗಳ ಹಿಂದೆ ಇಲ್ಲೇ ಎರಡು ಗಂಧದ ಮರ ಕಳುವಾಗಿತ್ತು. ಈ ಕುರಿತು ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

key words : Forest-Department-premises-Had-grown-Sandalwood-tree-stolen …!