ಓಲೈಕೆಗಾಗಿ ಅಲ್ಲ: ಸಮುದಾಯಗಳ ಅಭಿವೃದ್ಧಿಗಾಗಿ ನಿಗಮ ರಚಿನೆ- ಸಚಿವ ಬಿ.ಸಿ ಪಾಟೀಲ್ ಸ್ಪಷ್ಟನೆ…

ಕೊಪ್ಪಳ,ನವೆಂಬರ್.20,2020(www.justkannada.in): ಓಲೈಕೆಗಾಗಿ ನಿಗಮ ರಚನೆ ಮಾಡಿರುವುದಲ್ಲ. ಸಮುದಾಯಗಳ ಅಭಿವೃದ್ಧಿಗಾಗಿ ನಿಗಮ ರಚನೆ ಮಾಡಲಾಗಿದೆ ಎಂದು  ಕೃಷಿ ಸಚಿವ ಬಿ.ಸಿ ಪಾಟೀಲ್ ಸ್ಪಷ್ಟಪಡಿಸಿದರು.kannada-journalist-media-fourth-estate-under-loss

ಮರಾಠ ಅಭಿವೃದ್ದಿ ನಿಗಮ ಮತ್ತು ವೀರಶೈಮ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ಕುರಿತು ಕೊಪ್ಪಳದಲ್ಲಿ ಇಂದು ಮಾತನಾಡಿದ ಸಚಿವ ಬಿ.ಸಿ ಪಾಟೀಲ್.  ಸರ್ಕಾರ ಮರಾಠ ಅಭಿವೃದ್ಧಿ ನಿಗಮ ಹಾಗೂ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಗಳಿಗೆ ಆದೇಶ ಮಾಡಿರುವುದು ಸ್ವಾಗತಾರ್ಹವಾಗಿದ್ದು, ಇದರಿಂದ ಮರಾಠ ಹಾಗೂ ವೀರಶೈವ ಲಿಂಗಾಯತ ಸಮುದಾಯಗಳ ಹಿಂದುಳಿದವರಿಗೆ ಬಡವರಿಗೆ ಅನುಕೂಲವಾಗಲಿದೆ.ಇದು ಮರಾಠಿ ಭಾಷೆ ಪ್ರಾಧಿಕಾರ ಇದಲ್ಲ. ಕರ್ನಾಟಕದಲ್ಲಿರುವ ಮರಾಠಿಗರನ್ನು ಕರ್ನಾಟಕ ಬಿಟ್ಟು ಕಳುಹಿಸಲಾಗುವುದಿಲ್ಲ. ಮರಾಠರ ಅಭಿವೃದ್ಧಿಗಾಗಿ ಸರ್ಕಾರ ನಿಗಮ ಮಾಡಿದ್ದು ಸ್ವಾಗತಾರ್ಹ. ಅದರಂತೆ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಮಾಡಿದ್ದು ಸಹ ಸರಿಯಾಗಿದೆ ಎಂದರು.formation-corporation-development-communities-minister-bc-patil

ರಾಜ್ಯದಲ್ಲಿ ವೀರಶೈವ ಲಿಂಗಾಯತ ದೊಡ್ಡ ಸಮುದಾಯವಾಗಿದ್ದರೂ ಈ ಸಮುದಾಯದಲ್ಲಿ ಬಡವರು ಹಿಂದುಳಿದವರು ಇದ್ದಾರೆ. ನಿಗಮ ರಚನೆಯಿಂದ ಇವರಿಗೆ ಅನುಕೂಲವಾಗಲಿದೆ. ಇದೇ ರೀತಿ  ಮರಾಠ ಅಭಿವೃದ್ಧಿ ನಿಗಮದಿಂದ ಮರಾಠಿಗರಲ್ಲಿರುವ ಬಡವರಿಗೆ ಹಿಂದುಳಿದವರಿಗೂ ಕೂಡ ಅನುಕೂಲವಾಗಲಿದೆ.ಕುಂಬಾರ ಅಭಿವೃದ್ಧಿ ನಿಗಮ, ವಿಶ್ವಕರ್ಮ ಅಭಿವೃದ್ಧಿ ನಿಗಮ, ಬ್ರಾಹ್ಮಣ ನಿಗಮ, ಅಲ್ಪಸಂಖ್ಯಾತರಿಗೂ ನಿಗಮವಿದೆ ಎಂದರು. ಓಲೈಕೆಗಾಗಿ ನಿಗಮ ರಚನೆ ಮಾಡಿರುವುದಲ್ಲ. ಸಮುದಾಯಗಳ ಅಭಿವೃದ್ಧಿಗಾಗಿ ನಿಗಮ ರಚಿಸಲಾಗಿದೆ ಎಂದು ಸಚಿವ ಬಿ.ಸಿ ಪಾಟೀಲ್ ಸ್ಪಷ್ಟಪಡಿಸಿದರು.

ಸಂಪುಟ ವಿಸ್ತರಣೆ(ಪುನಾರಚನೆ) ಸಿಎಂ ಪರಮಾಧಿಕಾರಕ್ಕೆ ಬಿಟ್ಟಿದ್ದು…

ಸಚಿವ ಸಂಪುಟ ವಿಸ್ತರಣೆ ಅಥವಾ ಪುನರಚನೆ ಕುರಿತು ಪ್ರತಿಕ್ರಿಯಿಸಿದ ಸಚಿವ ಬಿ.ಸಿ ಪಾಟೀಲ್, ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಪರಮಾಧಿಕಾರ ಮುಖ್ಯಮಂತ್ರಿಗಳ ಪರಮಾಧಿಕಾರವಾಗಿದ್ದು, ಈ ಸಂಬಂಧ ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ. ಶಾಸಕರೆಲ್ಲರಿಗೂ ಸಚಿವರಾಗಬೇಕು ಎನ್ನುವ ಆಸೆ ಸಹಜವೇ. ಇದರಲ್ಲಿ ತಪ್ಪೇನಿಲ್ಲ. ಸಚಿವ ಸಂಪುಟವೋ ವಿಸ್ತರಣೆಯೋ ಎನ್ನುವುದು ವರಿಷ್ಠರಿಗೆ ಬಿಟ್ಟ ವಿಚಾರ. ಸಿಎಂ ಪರಮಾಧಿಕಾರ ಎಂದರು.

Key words:  Formation – corporation – development – communities- Minister –BC patil