ಬಣ ರಾಜಕೀಯ ಶಮನಕ್ಕೆ ಯತ್ನ: ಕೆ.ಎಚ್ ಮುನಿಯಪ್ಪ ಭೇಟಿಯಾದ ಸಿದ್ಧರಾಮಯ್ಯ.

kannada t-shirts

ಬೆಂಗಳೂರು,ಜನವರಿ,9,2023(www.justkannada.in): ಕೋಲಾರದಲ್ಲಿ ಮಾಜಿ ಸಂಸದ ಕೆ.ಎಚ್ ಮುನಿಯಪ್ಪ ಮತ್ತು ಮಾಜಿ ಸ್ಪೀಕರ್ ರಮೇಶ್ ಕುಮಾರ್ ನಡುವೆ ಭಿನ್ನಾಭಿಪ್ರಾಯಗಳಿದ್ದು ಬಣಗಳ ಕಿತ್ತಾಟ ಆಗ್ಗಾಗ್ಗೆ ನಡೆಯುತ್ತಲೇ ಇರುತ್ತದೆ. ಈ ಹಿನ್ನೆಲೆಯಲ್ಲಿ ಬಣ ರಾಜಕೀಯ ಶಮನಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಮುಂದಾಗಿದ್ದಾರೆ.

ಮುಂಬರುವ ರಾಜ್ಯ ವಿಧಾನ ಸಭಾ ಚುನಾವಣೆಗೆ ಸ್ಪರ್ಧಿಸಲು ಸಿದ್ಧತೆ ಆರಂಭಿಸಿರುವ  ಮಾಜಿ ಸಿಎಂ ಸಿದ್ದರಾಮಯ್ಯ, ಕೋಲಾರ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ  ಇಂದು ಮಾಜಿ ಸಂಸದ ಕೆಎಚ್‌ ಮುನಿಯಪ್ಪ ಅವರನ್ನ ಬೆಂಗಳೂರಿನ ನಿವಾಸದಲ್ಲಿ ಭೇಟಿಯಾಗಿ ಚರ್ಚಸಿದರು.

ಕೋಲಾರದಲ್ಲಿ ರಮೇಶ್ ಕುಮಾರ್ ಹಾಗೂ ಕೆ.ಎಚ್ ಮುನಿಯಪ್ಪ ನಡುವಿನ ಭಿನ್ನಾಭಿಪ್ರಾಯವಿದ್ದು  ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸಿದರೇ ಸಮಸ್ಯೆಯಾಗಬಹುದಾಗಿದ್ದು ಈ ಹಿನ್ನೆಯಲ್ಲಿ ಬಣ ರಾಜಕೀಯ ಶಮನಕ್ಕೆ ಸಂದಾನ ಸೂತ್ರ.ವನ್ನ ಸಿದ್ಧರಾಮಯ್ಯ ಅನುಸರಿಸಿದ್ದಾರೆ ಎನ್ನಲಾಗಿದೆ.

Key words: Former CM-Siddaramaiah -met -KH Muniappa-Bangalore

website developers in mysore