ಸಿದ‍್ಧರಾಮಯ್ಯಗೆ 2ನೇ ದಿನವೂ ಪ್ರತಿಭಟನೆ ಬಿಸಿ: ಖಾಕಿ ಭದ್ರತೆ ನಡುವೆಯೂ ಕಪ್ಪು ಬಾವುಟ ಪ್ರದರ್ಶನ.

ಚಿಕ್ಕಮಗಳೂರು,ಆಗಸ್ಟ್,19,2022(www.justkannada.in):  ವಿಪಕ್ಷ ನಾಯಕ ಸಿದ್ಧರಾಮಯ್ಯಗೆ 2ನೇ ದಿನವೂ ಪ್ರತಿಭಟನೆಯ ಬಿಸಿ ತಟ್ಟಿದ್ಧು ಚಿಕ್ಕಮಗಳೂರಿನಲ್ಲಿ ಪೊಲೀಸ್ ಭದ್ರತೆಯ ನಡುವೆಯೂ ಕಪ್ಪು ಬಾವುಟ ಪ್ರದರ್ಶನ ಮಾಡಲಾಗಿದೆ.

ಇಂದು ಮಾಜಿ ಸಿಎಂ ಸಿದ್ಧರಾಮಯ್ಯ ಚಿಕ್ಕಮಗಳೂರಿನ ನೆರೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಣೆ ಮಾಡುತ್ತಿದ್ದಾರೆ. ಈ ಮಧ್ಯೆ ಕೊಪ್ಪ ತಾಲ್ಲೂಕಿನ ಮಕ್ಕಿಕೊಪ್ಪದಲ್ಲಿ  ಸಿದ್ಧರಾಮಯ್ಯ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ  ಕಪ್ಪು ಬಾವುಟ ಪ್ರದರ್ಶನ ಮಾಡಿದ್ದು,  ಹಿಂದೂ ವಿರೋಧಿ ಸಿದ‍್ಧರಾಮಯ್ಯ ಈ ಪುಣ್ಯಭೂಮಿಗೆ ಬರೋದು ಬೇಡ ಎಂದು ಸಾವರ್ಕರ್ ಫೋಟೊ ಹಿಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿನ್ನೆ ಕೊಡಗು ಪ್ರವಾಸ ಕೈಗೊಂಡಿದ್ಧ ಸಿದ‍್ಧರಾಮಯ್ಯಗೆ ಮೂರ್ನಾಲ್ಕು ಕಡೆಗಳಲ್ಲಿ ಪ್ರತಿಭಟನೆ ಬಿಸಿ ತಟ್ಟಿತ್ತು. ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶನ ಮಾಡಿದ್ಧರು. ಈ ನಡುವೆ  ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದವೂ ನಡೆದಿತ್ತು. ನಂತರ ಸಿದ್ಧರಾಮಯ್ಯ ಕಾರಿಗೆ ಮೊಟ್ಟೆ ಎಸೆಯಲಾಗಿತ್ತು.

Key words: former CM- Siddaramaiah-protest -chikkamagalore