ಸಿದ್ದರಾಮಯ್ಯ ಒಳ ಒಪ್ಪಂದಗಳ ಜನಕ ಎಂಬ ಹೆಚ್.ಡಿಕೆ ಟ್ವೀಟ್ ಗೆ ಮಾಜಿ ಸಿಎಂ ಸಿದ್ಧರಾಮಯ್ಯ  ರಿಯಾಕ್ಷನ್ ಏನು ಗೊತ್ತೆ..?

ಮೈಸೂರು,ಡಿಸೆಂಬರ್,19,2020(www.justkannada.in):  ಸಿದ್ದರಾಮಯ್ಯ ಒಳ ಒಪ್ಪಂದಗಳ ಜನಕ ಎಂದು ಮಾಜಿ‌‌ ಸಿಎಂ ಕುಮಾರಸ್ವಾಮಿ ಟೀಕೆಗೆ ಮಾಜಿ‌ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.  ಈ ಬಗ್ಗೆ  ನೋ ರಿಯಾಕ್ಷನ್. ಅವನು ಹೇಳಿದ್ದಕ್ಕೆಲ್ಲಾ ನಾನು ಪ್ರತಿಕ್ರಿಯೆ ಕೊಡಲ್ಲ ಎಂದಿದ್ದಾರೆ.Teachers,solve,problems,Government,bound,Minister,R.Ashok

ಮೈಸೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ಚಾಮುಂಡೇಶ್ವರಿಯಲ್ಲಿ ಬಿಜೆಪಿ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡದ್ದು ನಿಜ. ನಾನು ಅದನ್ನೇ ಹೇಳಿದ್ದೇನೆ.  ಬಿಜೆಪಿ ಜೆಡಿಎಸ್ ಹೊಂದಾಣಿಕೆ ಬಾದಾಮಿಯಲ್ಲಿ ಮಾಡಿಕೊಂಡಿರಲಿಲ್ಲ. ಅಯ್ಕೆ ಮಾಡಿಕೊಂಡ ಕೆಲವೇ ಕ್ಷೇತ್ರಗಳಲ್ಲಿ ಹೊಂದಾಣಿಕೆ‌ ಮಾಡಿಕೊಂಡಿದ್ದವು. ಗೋಪಾಲ್ ಗೆ ಟಿಕೆಟ್ ಕೊಟ್ಟು ನಿಲ್ಲಿಸಿದ್ದು ಯಾರು.? ಯಾರು ಒಳ ಒಪ್ಪಂದ ಮಾಡಿಕೊಂಡಿದ್ರು ಅಂತಾ ಎಲ್ಲರಿಗೂ ಗೊತ್ತಿದೆ. ಅವರು ಹೇಳಿದ್ದಕ್ಕೆಲ್ಲಾ ನಾನು ಉತ್ತರ ಕೊಡಲ್ಲ ಎಂದರು.

ಸಿಎಂ ಆಗೋ ಮುಂಚೆನೇ  ಹೋಟೆಲ್ ನಲ್ಲಿ ಕುಮಾರಸ್ವಾಮಿ ರೂಂ ಮಾಡಿಕೊಂಡಿದ್ರು…

ತಾಜ್ ವೆಸ್ಟೆಂಡ್ ನಲ್ಲಿ ಇರಲು ಸಿದ್ದರಾಮಯ್ಯ ಕಾರಣ ಎಂಬ ಸಾರಾ ಮಹೇಶ್ ಆರೋಪಕ್ಕೆ ತಿರುಗೇಟು ನೀಡಿದ ಮಾಜಿ ಸಿಎಂ ಸಿದ್ಧರಾಮಯ್ಯ,  ಸಿಎಂ ಆದ ಮೇಲೆ ತಾಜ್ ವೆಸ್ಟೆಂಡ್ ಗೆ ಹೋಗಿದ್ದಲ್ಲ. ಅದಕ್ಕಿಂತ ಮುಂಚೆನೇ ಅಲ್ಲಿ ಕುಮಾರಸ್ವಾಮಿ ರೂಂ ಮಾಡಿಕೊಂಡಿದ್ರು ಎಂದು ಹೇಳಿದರು.

ಬಿಜೆಪಿ‌ ಬಗ್ಗೆ ಜೆಡಿಎಸ್ ಬರೀ ಸಾಫ್ಟ್ ಅಲ್ಲ. ಅವರ ಬೆಂಬಲಕ್ಕೆ ನಿಂತದ್ದು ಮೇಲ್ಮನೆಯಲ್ಲಿ ಕಾಣಲಿಲ್ಲವೇ. ಬಿಜೆಪಿ ಜೊತೆ ಜೆಡಿಎಸ್ ವಿಲೀನ ಆಗುತ್ತೋ ಇಲ್ವೋ ನಂಗೆ ಗೊತ್ತಿಲ್ಲ. ಆದರೆ ನಾನು ಜೆಡಿಎಸ್ ನಲ್ಲಿದ್ದಾಗ 59 ಸ್ಥಾನ ಗೆದ್ದಿದ್ದೋ.ಅದು ಗೊತ್ತಿದೆಯಲ್ವಾ ಎಂದು ಸಿದ್ಧರಾಮಯ್ಯ ತಿಳಿಸಿದರು.former-cm-siddaramaiahs-reaction-hd-kumaraswamy-tweet

ನಾನು ಸ್ಥಳೀಯ ಮುಖಂಡರ ಬಗ್ಗೆ ಹೇಳಿದ್ದೆ…

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ತಮ್ಮ ಸೋಲಿಗೆ ಪಕ್ಷದ ಮುಖಂಡರು ಕಾರಣ ಅಂತಾ ಹೇಳಿದ್ದೀನಿ. ಇದು ಚಾಮುಂಡೇಶ್ವರಿ ಕ್ಷೇತ್ರದ ವಿಚಾರ ತಾನೇ. ಅಲ್ಲಿಯವರ ಬಗ್ಗೆ ನಾನು ಹೇಳಿರೋದು.  ರಾಜ್ಯದ ಬೇರೆ ಕಾಂಗ್ರೆಸ್ ನಾಯಕರ ಹೆಸರು ಹೇಳಿಲ್ಲ ಎಂದು ನಿನ್ನೆ ಹೇಳಿದ್ದನ್ನ ಮಾಜಿ‌ ಸಿಎಂ ಸಿದ್ದರಾಮಯ್ಯ ಸಮರ್ಥಸಿಕೊಂಡರು.

Key words: Former CM -Siddaramaiah’s -reaction – HD kumaraswamy- tweet