ಎರಡು ಕ್ಷೇತ್ರಗಳಲ್ಲಿ  ಟಿಕೆಟ್ ನೀಡುವಂತೆ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಪಟ್ಟು…?

ತುಮಕೂರು,ಏಪ್ರಿಲ್,4,2023(www.justkannada.in):  ಮಾಜಿ ಸಿಎಂ ಸಿದ್ಧರಾಮಯ್ಯ ಈ ಬಾರಿಯೂ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದು ಈಗಾಗಲೇ ವರುಣಾ ಕ್ಷೇತ್ರದಿಂದ ಟಿಕೆಟ್ ಘೋಷಣೆಯಾಗಿದೆ. ಕೋಲಾರದಿಂದಲೂ ಸಿದ್ಧರಾಮಯ್ಯ ಸ್ಪರ್ಧಿಸುವ ಸಾಧ್ಯತೆ ಇದೆ. ಈ ನಡುವೆ ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್ ಸಹ ಎರಡು ಕ್ಷೇತ್ರಗಳಲ್ಲಿ ಟಿಕೆಟ್ ನೀಡುವಂತೆ  ಹೈಕಮಾಂಡ್ ಬಳಿ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.

ಕೊರಟಗೆರೆ ಮತ್ತು ಪುಲಕೇಶಿ ನಗರದಿಂದ ಟಿಕೆಟ್ ನೀಡುವಂತೆ  ಡಾ.ಜಿ.ಪರಮೇಶ್ವರ್  ಪಕ್ಷದ ಹೈಕಮಾಂಡ್ ಗೆ ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ. ಕಳೆದ ಸಲ ನನಗೆ ಅನ್ಯಾಯವಾಗಿದೆ. ನಾನು ಸಿಎಂ ಆಕಾಂಕ್ಷಿ. ಸಿದ್ಧರಾಮಯ್ಯರಂತೆ ನನಗೂ  2 ಕ್ಷೇತ್ರದಲ್ಲಿ ಟಿಕೆಟ್ ನೀಡಿ. ಕಳೆದ ಬಾರಿ ಸೋತಿದ್ದಕ್ಕೆ ಸಿಎಂ ಹುದ್ದೆ ಸಿಗಲಿಲ್ಲ. ಹೀಗಾಗಿ ಎರಡು ಕ್ಷೇತ್ರಗಳಲ್ಲಿ ಟಿಕೆಟ್ ನೀಡಿ ಎಂದು ಪರಮೇಶ್ವರ್ ಪಟ್ಟು ಹಿಡಿದಿದ್ದಾರೆ ಎಂಬ ಸುದ್ದಿ ಲಭ್ಯವಾಗಿದೆ.

ಪರಮೇಶ್ವರ್ ಪ್ರಸ್ತಾಪಕ್ಕೆ  ಶಾಸಕರಾದ ಅಖಂಡ ಶ್ರೀನಿವಾಸ್ ಮೂರ್ತಿ ಮತ್ತು ಜಮೀರ್ ಅಹ್ಮದ್ ಖಾನ್  ಆಕ್ಷೇಪ ವ್ಯಕ್ತಪಡಿಸಿದ್ದು ಪರಮೇಶ್ವರ್ ಗೆ ಎರಡು ಕ್ಷೇತ್ರದಲ್ಲಿ ನಿಲ್ಲುವ ಅವಶ್ಯಕತೆ ಇಲ್ಲ.  ಬೇರೆಯವರಿಗೆ ಕ್ಷೇಥ್ರದಲ್ಲಿ ಟಿಕಟ್  ತಪ್ಪಿಸುವುದು ಸರಿಯಲ್ಲ. ಸಿದ್ದರಾಮಯ್ಯರ 2ಕ್ಷೇತ್ರ ತಪ್ಪಿಸಲು ನಾಟಕ ಎಂದು ಪಕ್ಷದ ವರಿಷ್ಠರ ಮುಂದೆ ಆಕ್ಷೇಪಿಸಿದ್ದಾರೆ ಎನ್ನಲಾಗಿದೆ.

Key words: Former DCM- Dr. G. Parameshwar – tickets – two constituencies