ಚಾಮುಂಡಿ ಬೆಟ್ಟಕ್ಕೆ ಭೇಟಿ: ಸೋನಿಯಾ ಗಾಂಧಿ ಹೆಸರಲ್ಲಿ ಅರ್ಚನೆ ಮಾಡಿಸಿದ ಮಾಜಿ ಸಚಿವ ಡಿ.ಕೆ ಶಿವಕುಮಾರ್

ಮೈಸೂರು,ನ,8,2019(www.justkannada.in):  ನಿನ್ನೆಯಿಂದ ಮೈಸೂರು ಪ್ರವಾಸದಲ್ಲಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು.

ಇಂದು ಚಾಮುಂಡಿ ಬೆಟ್ಟಕ್ಕೆ ತೆರಳಿದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೆಸರಿನಲ್ಲಿ ಅರ್ಚನೆ ಮಾಡುವಂತೆ ಹೇಳಿದರು. ಸೋನಿಯಾ ಗಾಂಧಿ ಅವರ ಆರೋಗ್ಯ ಸುಧಾರಿಸಲಿ ಎಂದು ಪೂಜೆ ಮಾಡಿಸಿದ್ದಾರೆ.

ಡಿ.ಕೆ ಶಿವಕುಮಾರ್ ಗೆ ಬೆಂಬಲಿಗರು ಕಾಂಗ್ರೆಸ್ ಕಾರ್ಯಕರ್ತರು ಸಾಥ್ ನೀಡಿದರು. ಈ ವೇಳೆ ಮಾಜಿ ಸಚಿವ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡರು ಸಹ ಉಪಸ್ಥಿತರಿದ್ದರು.

Key words:  Former minister -DK Sivakumar- visit-mysore-chamundi hills