ನೈಸ್ ಸಂಸ್ಥೆ ಅಕ್ರಮಗಳ ಪಟ್ಟಿ ಬಿಚ್ಚಿಟ್ಟ ಮಾಜಿ ಪ್ರಧಾನಿ ದೇವೇಗೌಡ

ಬೆಂಗಳೂರು, ಏಪ್ರಿಲ್ 03, 2022 (www.justkannada.in): ನೈಸ್ ಸಂಸ್ಥೆ ಅಕ್ರಮದ ವಿರುದ್ಧ ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಅವರು ಇಂದು ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೈಸ್ ಸಂಸ್ಥೆ ಟೋಲ್ ಹಣವನ್ನು ಸರ್ಕಾರದ ಅನುಮತಿ ‌ಇಲ್ಲದೆ ಹೆಚ್ಚಳ ಮಾಡಿದೆ.ನೈಸ್ ಸಂಸ್ಥೆಯು ಸರ್ಕಾರದ ಎಲ್ಲಾ ನಿಯಮಗಳನ್ನೂ ಗಾಳಿಗೆ ತೂರಿದೆ. ಈ ಬಗ್ಗೆ ಸಿಎಂ ಬೊಮ್ಮಾಯಿಗೆ ಪತ್ರ ಬರೆದಿದ್ದಿನಿ. ನೈಸ್ ಸಂಸ್ಥೆಗೆ ಕೊಮ್ಮನಗಟ್ಟದ ಬಳಿ‌ ನೀಡಿರೋ 41 ಎಕರೆ ಜಾಗದ ಸೇಲ್ ಡೀಡ್ ರದ್ದುಗೊಳಿಸುವಂತೆ ಪತ್ರ ಬರೆದಿದ್ದೇನೆ. ವಿಧಾನ ಪರಿಷತ್ ನಲ್ಲಿ ಈ ವಿಷಯ ಚರ್ಚೆ ಆಯ್ತು. ಆದ್ರೆ ಯಾವುದೇ ಸಚಿವರು ಸರಿಯಾಗಿ ಉತ್ತರ ಕೊಟ್ಟಿಲ್ಲ ಎಂದು ಎಚ್ಡಿಡಿ ಬೇಸರ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಎಚ್ಡಿಡಿ ಹೇಳಿದ್ದಿಷ್ಟು…
ನಾನು ಅನೇಕ ಪತ್ರಗಳನ್ನು ಸಿಎಂ ಅವರಿಗೆ ಮತ್ತು ಸಿಎಸ್ ಅವರಿಗೆ ಕೈಗಾರಿಕೆ ಇಲಾಖೆ ಕಾರ್ಯದರ್ಶಿಗೂ ಕೂಡ ಪತ್ರ ಬರೆದಿದ್ದೇನೆ. ಸರ್ಕಾರ ನೈಸ್ ವಿಚಾರವಾಗಿ ಕಮಿಟಿ‌ ಮಾಡ್ತು. ಕಮಿಟಿಯನ್ನ ಪದೇ‌ ಪದೇ ಬದಲಾವಣೆ ಮಾಡುತ್ತಾ ಹೋದ್ರು. ಸಚಿವ ಮಾಧುಸ್ವಾಮಿ ಅವ್ರು ಈ ಕಂಪನಿ ವ್ಯವಹಾರಗಳು ಸರಿ ಇಲ್ಲ ಅಂತ ಹೇಳಿದ್ದಾರೆ. ಆಗ ಅವ್ರಿಗೆ 5 ಲಕ್ಷ ಮಾತ್ರ ಪೆನಾಲ್ಟಿ ಹಾಕಿದ್ರು. ಈಗ ಮಾಧುಸ್ವಾಮಿ ಅವ್ರನ್ನ ಕಮಿಟಿಯಿಂದ ಕೈ ಬಿಟ್ಟಿದ್ದಾರೆ.
ನಾನು ಒಳ್ಳೆ ಉದ್ದೇಶಕ್ಕಾಗಿ ಯೋಜನೆ ತಂದೆ. ಆದ್ರೆ ನಂತ್ರ ‌ಇದ್ರಲ್ಲಿ ಅನೇಕ ನಿಯಮಗಳನ್ನೂ ಬದಲಾವಣೆ ‌ಮಾಡಿದ್ದಾರೆ. ನೈಸ್ ಬಗ್ಗೆ ಸದನ‌ ಸಮಿತಿ ಮಾಡಿದ್ರು. ಸದನ ಸಮಿತಿ ವರದಿ ಕೊಡ್ತು ರಸ್ತೆ ಮಾಡದೇ ಟೋಲ್ ಸಂಗ್ರಹ ಮಾಡುತ್ತಿದ್ದಾರೆ ಮೈಸೂರು ರೋಡ್ ಮಾಡಿದ ಮೇಲೆ ಟೌನ್ ಶಿಪ್ ಮಾಡಬೇಕು ಅಂತ ಇತ್ತು. ಆದರೆ ರಸ್ತೆ ಮಾಡದೇ ಟೋಲ್ ಸಂಗ್ರಹ ಮಾಡುತ್ತಿದ್ದಾರೆ .
ಸದನ ಸಮಿತಿ ಟೋಲ್ ಸಂಗ್ರಹ ರದ್ದು ಮಾಡಿ ಅಂತ ವರದಿ ಕೊಟ್ಟಿತ್ತು ಆದ್ರೆ 2016 ರಲ್ಲಿ ನೈಸ್ ಸಂಸ್ಥೆ ಅವರು ಹೈಕೋರ್ಟ್ ನಲ್ಲಿ ಸ್ಟೇ ತೆಗೆದುಕೊಳ್ತಾರೆ. ಸದನ ಸಮಿತಿಯ ವರದಿ ಮೀರಿ ಟೋಲ್ ಸಂಗ್ರಹ ಆಗಿದೆ. 2016 ರಿಂದ 2022 ರವರೆಗೆ ಟೋಲ್ ಸಂಗ್ರಹ ಮಾಡಿದ್ದಾರೆ. ನಿತ್ಯ 2-3 ಕೋಟಿ ಸಂಗ್ರಹ ಆಗುತ್ತೆ. ಯಾರಾದ್ರು ಅಧಿಕಾರಿಗಳು ಸ್ಥಳಕ್ಕೆ ಹೋಗಿ ಪರಿಶೀಲನೆ ಮಾಡಿದ್ದಾರಾ?
ನಮ್ಮ KIADB ಜಾಗವನ್ನು METRO ಗೆ 14 ಕೋಟಿಗೆ ನೈಸ್ ಸಂಸ್ಥೆ ಮಾರಾಟ ಮಾಡಿದೇ , ಈಗ ಮತ್ತೆ METRO ಗೆ ಸುಮಾರು 100 ಕೋಟಿಗೆ ಮಾರಾಟ ಮಾಡಿ ದುಡ್ಡು ಮಾಡಲು ನೈಸ್ ಸಂಸ್ಥೆ ಹೊರಟಿದೆ. ತುಂಬಾ ಆಸೆ ಇಟ್ಟು ಈ ಪ್ರಾಜೆಕ್ಟ್ ಮಾಡಿದ್ದೆ. ಆದ್ರೆ ರೈತರಿಗೆ ನೈಸ್ ಸಂಸ್ಥೆ ಸರಿಯಾಗಿ ಪರಿಹಾರವನ್ನೇ ನೀಡಲಿಲ್ಲ , ಇದು ನನ್ನ‌ ಕನಸಿನ ಪ್ರಾಜೆಕ್ಟ್ ಆಗಿತ್ತು. ಆದ್ರೆ ಈ ಕಂಪನಿ ರೈತರಿಗೆ ಅನ್ಯಾಯ ಮಾಡಿತ್ತು.
ಸರ್ಕಾರಿ ಜಮೀನನ್ನ ಅಡ ಇಟ್ಟು ಸಾಲ ಪಡೆದಿದ್ದಾರೆ. ದೇಶದಲ್ಲಿ ಉತ್ತಮ ರಸ್ತೆ ಮಾಡಲು ಈ ಪ್ರಾಜೆಕ್ಟ್ ಆಗಲೇ ಓಕೆ ಮಾಡಿದೆ. ಆದ್ರೆ ಇವತ್ತು ಎಲ್ಲಾ ಉಲ್ಟಾ ಆಗಿದೆ , ಮನಸ್ಸಿಗೆ ಬಹಳ ನೋವಾಗುತ್ತೆ.
ವಿಪರ್ವ್ಯಾಸವೆಂದರೆ ರಸ್ತೆ ಮಾಡದೇ ಟೋಲ್ ಸಂಗ್ರಹ ಮಾಡುತ್ತಿದ್ದಾರೆ , ಜೊತೆಗೆ ಕಾಂಕ್ರೀಟ್ ರೋಡ್ ಮಾಡಿದ್ದೇನೆ ಅಂತಾರೆ ಆದ್ರೆ ಅದು ಕೂಡ ಕಳಪೆ ರಸ್ತೆ ಆಗಿದೆ. ಈ‌ ಬಗ್ಗೆ ಅನೇಕ ಪತ್ರ ಬರೆದಿದ್ದೇನೆ. ಸರ್ಕಾರ ಏನು ಕ್ರಮ ತೆಗೆದುಕೊಂಡಿಲ್ಲ ಹೈಕೋರ್ಟ್ ಗೆ ಸರ್ಕಾರ ಅರ್ಜಿ ಹಾಕಬೇಕಿತ್ತು.ಇಷ್ಟು ಅಕ್ರಮ ಮಾಡಿದ್ದಾರೆ ಅಂತ ಅರ್ಜಿ ಹಾಕಬೇಕಿತ್ತು. ಆದರೆ ಯಾವ ಸರ್ಕಾರವೂ ಈ ಕೆಲಸವನ್ನ ಮಾಡಲಿಲ್ಲ. ಆಗ ಕುಮಾರಸ್ವಾಮಿ ಸಿಎಂ ಆಗಿದ್ದಾಗಲೂ ಕೂಡ ಸುಪ್ರೀಂಕೋರ್ಟ್ ಆದೇಶ ಪಾಲನೆ‌ ಮಾಡು ಅಂತ ಹೇಳಿದ್ದೆ.
ಸಿದ್ದರಾಮಯ್ಯ, ಯಡಿಯೂರಪ್ಪ, ಅವರಿಗೂ ಪತ್ರ ಬರೆದಿದ್ದೆ ಈಗ ಬೊಮ್ಮಾಯಿ ಅವರ ಸರ್ಕಾರಕ್ಕೆ ಬಹುಮತ ಇದೆ. ಈಗಲಾದ್ರು ಕ್ರಮ ತೆಗೆದುಕೊಳ್ಳಲಿ. ಭೂಮಿ ಕಳೆದುಕೊಂಡವರು ನನ್ನ ಬಳಿ ಬಂದು ನೋವು ತೋಡಿಕೊಂಡಿದ್ದಾರೆ. ಇದು ಪ್ರಾರಂಭ. ಮುಂದೆ ಇನ್ನು ಹೋರಾಟ ಇದೆ. ನಾನು ಕಣ್ಣು ಮುಚ್ಚಿಕೊಂಡು ಈ ಪ್ರಾಜೆಕ್ಟ್ ಮಾಡಿಲ್ಲ. ನಿಯಮ ಬದ್ದವಾಗಿ ಮಾಡಿದ್ದೆ. ನನ್ನ ಮೇಲೆ ಎರಡು ಕೋಟಿ ಮಾನನಷ್ಟ ಮೊಕದ್ದಮೆ ಹಾಕಿದ್ರು. ಅದಕ್ಕೆ ಕೋರ್ಟ್ ಸ್ಟೇ ಕೊಟ್ಟಿದೆ. ನನ್ನ ಮೇಲೆ ಕೇಸ್ ಇದೆ. ಸರ್ಕಾರ ಈಗಲಾದ್ರು ಕ್ರಮ ತೆಗೆದುಕೊಳ್ಳಲಿ.
ಎಲ್ಲಾ ಸಿಎಂಗಳಿಗೆ ಪತ್ರ ಬರೆದಿದ್ದೇನೆ. ಆದ್ರೆ ಏನು‌ ಪ್ರಯೋಜನ ಆಗಿಲ್ಲ. ಲೋಕೋಪಯೋಗಿ ‌ಇಲಾಖೆ ಸಚಿವರು ಮಾತ್ರ ನನ್ನ ಪತ್ರಕ್ಕೆ ಉತ್ತರ ಬರೆದಿದ್ದಾರೆ. ಈಗಿನ ಸಿಎಂ ಪಾಪ ತುಂಬಾ ಬ್ಯುಸಿ ಇದ್ದಾರೆ ಅದಕ್ಕೆ ಸಂಬಂಧ ಪಟ್ಟ ಮಂತ್ರಿಗಳಿಗೆ ಕೆಲಸ ಮಾಡಲು ಹೇಳಲಿ ಎಂದು ನೈಸ್ ವಿರುದ್ದ ಕ್ರಮಕ್ಕೆ ಸರ್ಕಾರವನ್ನ ಒತ್ತಾಯ ಮಾಡುತ್ತೇನೆ.