ಮಾಜಿ ಸಚಿವೆ ರೇಣುಕಾ ರಾಜೇಂದ್ರನ್ ನಿಧನ

ಬೆಂಗಳೂರು,ಡಿಸೆಂಬರ್,16,2020(www.justkannada.in) : ಗುಂಡೂರಾವ್ ಸರ್ಕಾರದಲ್ಲಿ ರೇಷ್ಮೆ ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಮಾಜಿ ಸಚಿವೆ ರೇಣುಕಾ ರಾಜೇಂದ್ರನ್(78) ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದಾರೆ.

I didn't knew CM BSY will think so cheaply - KPCC President D.K. Shivakumar

ಕಳೆದ ಕೆಲವು ದಿನಗಳಿಂದ ಕೊರೊನಾ ಸೋಂಕಿಗೆ ತುತ್ತಾಗಿ ಗುಣಮುಖರಾಗಿದ್ದರು. ಮಂಗಳವಾರ ಹೃದಯಾಘಾತದಿಂದ ಮೃತಪಟ್ಟಿದ್ದು, ಇಂದು(ಬುಧವಾರ) ಚಿಕ್ಕಬಳ್ಳಾಪುರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

Former,Minister,Renuka Rajendran,dies

ರೇಣುಕಾ ಅವರು ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ. 1989ರಲ್ಲಿ ಮೂರನೇ ಬಾರಿಗೆ ಚಿಕ್ಕಬಳ್ಳಾಪುರ ಮೀಸಲು ಕ್ಷೇತ್ರದಿಂದ ವಿಧಾನಸಭೆ ಪ್ರವೇಶಿಸಿದ್ಧ ರೇಣುಕಾ ಅವರು ಗುಂಡೂರಾವ್ ಸರ್ಕಾರದ ಸಂಪುಟದಲ್ಲಿ ರೇಷ್ಮೆ ಖಾತೆ ಸಚಿವರಾಗಿದ್ದರು.

key words : Former-Minister-Renuka Rajendran-dies