ನಟ ಗಣೇಶ್ ಹುಟ್ಟುಹಬ್ಬಕ್ಕೆ ಗಾಳಿಪಟ-2 ಸಾಂಗ್ ಗಿಫ್ಟ್!

ಬೆಂಗಳೂರು, ಜುಲೈ 01, 2022 (www.justkannada.in): ನಟ ಗಣೇಶ್ ಹುಟ್ಟುಹಬ್ಬದ ಅಂಗವಾಗಿ  “ಗಾಳಿಪಟ ೨” ಚಿತ್ರತಂಡ ಹಾಡು ಇದೇ ಜುಲೈ 2 ಬಿಡುಗಡೆಯಾಗಲಿದೆ.

ಜಯಂತ ಕಾಯ್ಕಿಣಿ ಅವರು ಬರೆದಿರುವ “ನಾನಾಡದ ಮಾತೆಲ್ಲವ ಕದ್ದಾಲಿಸು” ಎಂಬ ಹಾಡನ್ನು ಸೋನು ನಿಗಮ್ ಹಾಡಿದ್ದಾರೆ .

ಅಂದಹಾಗೆ “ಗಾಳಿಪಟ” ಮೊದಲ ಭಾಗದ “ಮಿಂಚಾಗಿ ನೀನು ಬರಲು” ಹಾಡು ಕೂಡ ಜಯಂತ ಕಾಯ್ಕಿಣಿ, ಸೋನು ನಿಗಮ್, ಗಣೇಶ್ ಹಾಗೂ ಯೋಗರಾಜ್ ಭಟ್ ಕಾಂಬಿನೇಶನ್ ನಲ್ಲಿ ಮೂಡಿ ಬಂದಿತ್ತು.

ಜುಲೈ 2 ರಂದು ಆನಂದ್ ಆಡಿಯೋ ಮೂಲಕ ಈ ಹಾಡು ಎಲ್ಲರಿಗೂ ತಲುಪಲಿದೆ ಎಂದು ನಿರ್ದೇಶಕ ಯೋಗರಾಜ್ ಭಟ್ ತಿಳಿಸಿದ್ದಾರೆ.

ಹಾಡು ಬರೆದಿರುವ ಜಯಂತ ಕಾಯ್ಕಿಣಿ ಕಾಯ್ಕಿಣಿ, ಹಾಡಿರುವ ಸೋನು ನಿಗಂ ಹಾಗೂ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಿಗೆ ಯೋಗರಾಜ್ ಭಟ್ ಧನ್ಯವಾದ ಹೇಳಿದ್ದಾರೆ.