ಅದ್ಧೂರಿ ದಸರೆಗೆ ತಾಲೀಮು ಆರಂಭಿಸಿದ ಗಜಪಡೆ

kannada t-shirts

ಮೈಸೂರು, ಆಗಸ್ಟ್ 14, 2022 (www.justkannada.in): ವಿಶ್ವ ವಿಖ್ಯಾತ ನಾಡ ಹಬ್ಬ ಮೈ ಸೂರು ದಸರಾ ಮಹೋತ್ಸವ ಹಿನ್ನಲೆ ಇಂದಿನಿಂದ ದಸರಾ ಗಜಪಡೆ ತಾಲೀಮು ಆರಂಭವಾಗಿದೆ.

ಮೈಸೂರು ಅರಮನೆ ಆವರಣದಿಂದ ಬನ್ನಿಮಂಟಪದ ವರೆಗೂ ಪ್ರತಿ ದಿನ ಬೆಳಗ್ಗೆ – ಸಂಜೆ ತಾಲೀಮು ನಡೆಸುವುದು ವಾಡಿಕೆ. ಅಂತೆಯೇ ಇಂದು ತಾಲೀಮು ಆರಂಭಕ್ಕೂ ಮುನ್ನಅರಮನೆ ಅವರಣದಲ್ಲಿ ಅನೆಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಕೋರೋನಾ ಹಿನ್ನೆಲೆ ಕಳೆದ ಎರಡು ವರ್ಷಗಳಿಂದ ಆನೆಗಳು ಅರಮನೆ ಆವರಣದಲ್ಲಿಯೇ ತಾಲೀಮು ನಡೆಸಲಾಗಿತ್ತು.ಎರಡು ವರ್ಷಗಳ ನಂತರ ಮತ್ತೆ ಎಂದಿನಂತೆ ಅರಮನೆಯಿಂದ ಬನ್ನಿ ಮಂಟಪದವರೆಗೆ ಗಜಪಡೆಗಳು ವಾಯುವಿಹಾರಕ್ಕೆ ತೆರಳುತ್ತಿದೆ.

ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ 9 ಆನೆಗಳು ಅರಮನೆಯಿಂದ ಹೊರಟು ಕೆಆರ್ ಸರ್ಕಲ್ ,ಸಯ್ಯಾಜಿರಾವ್ ರಸ್ತೆ,ಆಯುರ್ವೇದಿಕ್ ಸರ್ಕಲ್ ,ಬಂಬೂಬಜಾರ್ ರಸ್ತೆ ಮೂಲಕ ಬನ್ನಿ ಮಂಟಪ ತಲುಪುತ್ತದೆ.ಮತ್ತೆ ಬನ್ನಿ ಮಂಟಪದಿಂದ ಅರಮನೆಗೆ ವಾಪಾಸ್ ಆಗಲಿವೆ.

ಈ ವೇಳೆ ಅರಣ್ಯ ಅಧಿಕಾರಿ ಕರಿಕಾಳನ್ ಮಾತನಾಡಿ ದಸರಾ ಮಹೋತ್ಸವ ಹಿನ್ನಲೆ ಆನೆಗಳಿಗೆ ಇಂದಿನಿಂದ ತಾಲೀಮು ಪ್ರಾರಂಭ ಮಾಡಲಾಗಿದೆ. ಆನೆಗಳಿಗೆ ತೂಕ ಮಾಡಿಸಲಾಗಿದೆ. ಎಲ್ಲ ಅನೆಗಳು ಅರೋಗ್ಯವಾಗಿದೆ. ವಿಶೇಷವೆನೆಂದರೆ ನಗರ ವಾತಾವರಣಕ್ಕೆ ಆನೆಗಳು ಹೊಂದಿಕೊಂಡಿದೆ. ಒಂದು ವಾರದ ನಂತರ ಬಾರ ಹೊರುವ ತಾಲೀಮು ಪ್ರಾರಂಭ ಮಾಡಲಾಗುತ್ತೆ ಎಂದು ಮಾಹಿತಿ ನೀಡಿದರು.

website developers in mysore