ಪ್ರವಾಸಕ್ಕೆ ತೆರಳಿದ್ದ ಮೈಸೂರು ಮೂಲದ ಇಬ್ಬರು ಯುವಕರು ನೀರುಪಾಲು…

ಮೈಸೂರು,ಸೆಪ್ಟಂಬರ್,17,2020(www.justkannada.in): ಪ್ರವಾಸಕ್ಕೆಂದು ತೆರಳಿದ್ದ ಮೈಸೂರು ಮೂಲದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಗೋಕರ್ಣದಲ್ಲಿ ನಡೆದಿದೆ.jk-logo-justkannada-logo

ಸುಹಾಸ್ (17) ಮೃತ ಯುವಕ. ಮಂಡ್ಯ ಮೂಲದ ಬಾಲಕ ಉಲ್ಲಾಸ್ (15) ಕಣ್ಮರೆಯಾಗಿದ್ದಾನೆ. ಕಣ್ಮರೆಯಾಗಿರುವ ಬಾಲಕನಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಮೈಸೂರಿನಿಂದ 8 ಮಂದಿ ಯುವಕರು ಗೋಕರ್ಣ ಪ್ರವಾಸಕ್ಕೆ ತೆರಳಿದ್ದರು.gokarna-mysore-two-boys-swim-water-death

ಈ ನಡುವೆ ಗೋಕರ್ಣದಲ್ಲಿ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿದ್ದರೂ ಯುವಕರು ಸಮುದ್ರಕ್ಕಿಳಿದಿದ್ದರು. ಈ ವೇಳೆ ಓರ್ವ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು ಮತ್ತೋರ್ವ ಯುವಕ ಕಣ್ಮರೆಯಾಗಿದ್ದಾನೆ. ಸ್ಥಳಕ್ಕೆ ಗೋಕರ್ಣ ಪೊಲೀಸರು ಭೇಟಿ ನೀಡಿ ಪರಿಶೀಲನೆ  ನಡೆಸಿದ್ದು ಈ ಕುರಿತು ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: gokarna- Mysore – Two boys-swim-water-death