ವಕೀಲರಿಗೆ ಗುಡ್ ನ್ಯೂಸ್: ಆರೋಗ್ಯ ಸೌಲಭ್ಯಕ್ಕಾಗಿ ಮೂಲ ನಿಧಿ ಸ್ಥಾಪನೆಗೆ ನೆರವು ನೀಡಲು ರಾಜ್ಯ ಸರ್ಕಾರ ಒಪ್ಪಿಗೆ

ಬೆಂಗಳೂರು, ಜುಲೈ 24, 2022 (www.justkannada.in): ವಕೀಲರಿಗೆ ಅಗತ್ಯ ಆರೋಗ್ಯ ಸೌಲಭ್ಯಗಳನ್ನು ಒದಗಿಸಲು ಅನುಕೂಲವಾಗುವಂತೆ 100 ಕೋಟಿ ರೂ. ಮೂಲ ನಿಧಿ ಸ್ಥಾಪಿಸಲು ನೆರವು ನೀಡುವ ಯೋಜನೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ.

ವಕೀಲರಿಗೆ ಆರೋಗ್ಯ ಸೌಲಭ್ಯ ಕಾರ್ಯಕ್ರಮ ರೂಪಿಸಲು ಅನುವಾಗುವಂತೆ ಮೂಲ ನಿಧಿ ಸ್ಥಾಪಿಸಲು ನೆರವು ನೀಡಲಾಗುವುದು ಎಂದು 2022-23 ನೇ ಸಾಲಿನ ಬಜೆಟ್ ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದರು.

ಇದೀಗ ಮೂಲ ನಿಧಿ ಸ್ಥಾಪಿಸಲು ರಾಜ್ಯ ಸರ್ಕಾರವು ಶೇ.50 ರಷ್ಟು ಮೊತ್ತ ನೀಡಲಿದೆ. ಉಳಿದ ಮೊತ್ತವನ್ನು ವಕೀಲರ ಕೊಡುಗೆಯಿಂದ ಸಂಗ್ರಹಿಸಿ ಕರ್ನಾಟಕ ವಕೀಲರ ಪರಿಷತ್ ನೀಡಬೇಕು ಎಂದು ಆರ್ಥಿಕ ಇಲಾಖೆ ತಿಳಿಸಿದೆ. ಈ ಮೂಲಕ ರಾಜ್ಯದ ವಕೀಲರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದೆ.