“ಸರ್ಕಾರ ತೆಗೆಯುವ, ಹುಟ್ಟು ಹಾಕುವ ಶಕ್ತಿ ರಮೇಶ್ ಜಾರಕಿಹೊಳಿಗೆ ಇದೆ” : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಬೆಂಗಳೂರು,ಮಾರ್ಚ್,28,2021(www.justkannada.in) : ಸಿಡಿ ವಿಚಾರಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಸರ್ಕಾರ ತೆಗೆಯುವ, ಹುಟ್ಟು ಹಾಕುವ ಶಕ್ತಿ ರಮೇಶ್ ಜಾರಕಿಹೊಳಿ ಅವರಿಗಿದೆ. ಕಾನೂನು ಇದೆ. ತಪ್ಪು ಮಾಡಿದವರಿಗೆ ಶಿಕ್ಷೆಯಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

jkಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆ ಯುವತಿಗೂ ನನಗೂ ಸಂಬಂಧವಿಲ್ಲ. ನನ್ನನ್ನು ಭೇಟಿಯಾಗಿಲ್ಲ. ಮಾಧ್ಯಮಗಳ ಮೂಲಕ ಸಹಾಯ ಮಾಡಿ ಎಂದಿದ್ದಾಳೆ ಅಷ್ಟೇ. ಮಹಾನಾಯಕ, ಶೋಮ್ಯಾನ್ ಸೇರಿದಂತೆ ಅವಾಚ್ಯವಾಗಿ ಮಾತನಾಡಿದ್ದಾರೆ. ಅದು ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ಕನಕಪುರದಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದೀರಿ. ಸಂತೋಷ. ಸ್ವಾಗತಿಸುತ್ತೇನೆ ಎಂದಿದ್ದಾರೆ.

Government-removal-Inciting-Energy-Ramesh Zarakihioli-KPCC-President-D.K.Shivakumar

ಏನು ಬೇಕಾದರೂ ಹೇಳಲಿ. ಕೇಸ್ ದಾಖಲಿಸಲಿ. ಎಸ್ ಐ ಟಿ ತನಿಖೆ ನಡೆಸುತ್ತಿದೆ. ಕಾನೂನು ಇದೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಲಿ ಎಂದು ತಿಳಿಸಿದ್ದಾರೆ.

key words : Government-removal-Inciting-Energy-Ramesh Zarakihioli-KPCC-President-D.K.Shivakumar