ಸಿ.ಟಿ.ರವಿ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು

ಬೆಂಗಳೂರು,ನವೆಂಬರ್,08,2020(www.justkannada.in) : ಸಿ.ಟಿ.ರವಿ ಪ್ರವಾಸೋದ್ಯಮ, ಕನ್ನಡ ಹಾಗೂ ಸಂಸ್ಕೃತಿ ಸಚಿವ ಸ್ಥಾನಕ್ಕೆ ಸಲ್ಲಿಸಿದ್ದ ರಾಜೀನಾಮೆಯನ್ನು ರಾಜ್ಯಪಾಲ ವಜುಭಾಯಿ ವಾಲಾ ಅಂಗೀಕರಿಸಿದ್ದಾರೆ.jk-logo-justkannada-logo

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿರುವ ಸಿ.ಟಿ.ರವಿ, ಕಳೆದ ತಿಂಗಳು ಸಿಎಂಗೆ ತಮ್ಮ ರಾಜೀನಾಮೆ ಪತ್ರ ನೀಡಿದ್ದರು. ಆದರೆ, ಸಿಎಂ ಯಡಿಯೂರಪ್ಪ ರಾಜೀನಾಮೆ ಪತ್ರದ ಬಗ್ಗೆ ನಿರ್ಧಾರ ಕೈಗೊಂಡಿರಲಿಲ್ಲ. ಸದ್ಯಕ್ಕೆ ಸಚಿವನಾಗಿ ಮುಂದುವರಿಯುವಂತೆ ಸಿ.ಟಿ.ರವಿಗೆ ಸೂಚನೆ ನೀಡಿದ್ದರು.

ಎಂ ಶಿಫಾರಸಿನ ಮೇರೆಗೆ ರಾಜೀನಾಮೆ ಅಂಗೀಕರಿಸಲಾಗಿದೆ

ಇದೀಗ ರಾಜ್ಯಪಾಲ ವಜುಭಾಯಿ ವಾಲಾ ಅವರು ಸಿಎಂ ಶಿಫಾರಸಿನ ಮೇರೆಗೆ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಶನಿವಾರ ಸಿಎಂ ಯಡಿಯೂರಪ್ಪ ಅವರು ಸಿ.ಟಿ.ರವಿ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಕಳುಹಿಸಿದ್ದರು ಮತ್ತು ರಾಜೀನಾಮೆಯನ್ನು ಅಂಗೀಕರಿಸುವಂತೆ ಶಿಫಾರಸು ಮಾಡಿದ್ದರು ಎಂದು ತಿಳಿದು ಬಂದಿದೆ.

Governor-CT Ravi-accepts-resignation

key words : Governor-CT Ravi-accepts-resignation