ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಗೆ ಅಧಿಕ ಸ್ಥಾನ-ಶಾಸಕ ಲಿಂಬಾವಳಿ

kannada t-shirts

ಬೆಂಗಳೂರು,ಡಿಸೆಂಬರ್,20,2020(www.justkannada.in) : ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಬೆಂಬಲಿತ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷರು ಮತ್ತು ಶಾಸಕ ಅರವಿಂದ ಲಿಂಬಾವಳಿ ತಿಳಿಸಿದರು.

Teachers,solve,problems,Government,bound,Minister,R.Ashokನಗರದ ಓಲ್ಡ್ ಏರ್‌ಪೋರ್ಟ್ ರಸ್ತೆಯ ಹೋಟೆಲ್ ರಾಯಲ್ ಆರ್ಕಿಡ್‌ನಲ್ಲಿ  ಭಾನುವಾರ ನಡೆದ ಭಾರತೀಯ ಜನತಾ ಪಾರ್ಟಿಯ ರಾಜ್ಯ ಪದಾಧಿಕಾರಿಗಳ ಸಭೆಯ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನಪರ ಮತ್ತು ಕೃಷಿಕರ ಪರವಾದ ಆಡಳಿತವನ್ನು ಗಮನಿಸಿ ಜನರು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಪಂಚಾಯತ್‌ಗಳಿಗೆ ಇದೀಗ ನೇರವಾಗಿ ಗರಿಷ್ಠ ಅನುದಾನ ಲಭಿಸುತ್ತಿದೆ. ಇದರ ಸದ್ಬಳಕೆಗಾಗಿ ಜನರು ಬಿಜೆಪಿಯ ಬೆಂಬಲಿತರನ್ನೇ ಆಯ್ಕೆ ಮಾಡಲಿದ್ದಾರೆ ಎಂದರು.

ದಿವಂಗತ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವಾದ ಡಿಸೆಂಬರ್ 25 ಅನ್ನು ಬಿಜೆಪಿ, ರೈತರ ದಿನವಾಗಿ ಆಚರಿಸಲಿದೆ. ಪ್ರತಿ ಹೋಬಳಿಗಳಲ್ಲಿ ರೈತರ ಸಮಾವೇಶಗಳನ್ನು ಆಯೋಜಿಸಲಾಗುವುದು ಎಂದು ಹೇಳಿದರು.

ಕೇಂದ್ರ ಸರಕಾರದ ಕೃಷಿ ಸುಧಾರಣಾ ಕಾಯ್ದೆಗಳ ಕುರಿತು ಜನಜಾಗೃತಿ ಮೂಡಿಸಲಾಗುವುದು. ಅದೇ ದಿನ ಪ್ರಧಾನಿ ನರೇಂದ್ರ ಮೋದಿ ಅವರು 9 ಕೋಟಿ ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯ 2,000 ರೂಪಾಯಿಯನ್ನು ಬಿಡುಗಡೆ ಮಾಡಿ, ದೇಶದ ರೈತರನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮಾಹಿತಿ ನೀಡಿದರು.

GramPanchayat,BJP,election,High,ranking,Legislator,aravinda linbavali

ಜನವರಿ 2 ಮತ್ತು 3ರಂದು ರಾಜ್ಯದ ವಿಶೇಷ ಸಭೆ ಶಿವಮೊಗ್ಗದಲ್ಲಿ ನಡೆಯಲಿದೆ. ಜನವರಿ 8ರಿಂದ 11ರವರೆಗೆ ಜನಪ್ರತಿನಿಧಿ ಸಮಾವೇಶಗಳನ್ನು ಜಿಲ್ಲೆಗಳಲ್ಲಿ ನಡೆಸಿ ಗ್ರಾಮ ಪಂಚಾಯತ್‌ಗಳಿಗೆ ಆಯ್ಕೆಯಾದವರನ್ನು ಗೌರವಿಸಲಾಗುವುದು ಎಂದು ಹೇಳಿದರು.

ನಮ್ಮ ಪಕ್ಷದವರೇ ನನ್ನನ್ನು ಸೋಲಿಸಿದರು ಎಂಬ ಸಿದ್ದರಾಮಯ್ಯ ಅವರ ಹೇಳಿಕೆಯು ಕಾಂಗ್ರೆಸ್ ಒಳಜಗಳದ ಸೂಚನೆ ಎಂದು ಭಾವಿಸುತ್ತೇನೆ ಎಂದು ತಿಳಿಸಿದರು.

ರಾಜ್ಯಸಭಾ ಸದಸ್ಯರು ಮತ್ತು ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ, ಬೆಂಗಳೂರು ಪ್ರಭಾರಿ ಗೋಪಿನಾಥ ರೆಡ್ಡಿ, ಮಾಧ್ಯಮ ವಿಭಾಗದ ರಾಜ್ಯ ಸಂಚಾಲಕ ಕರುಣಾಕರ ಖಾಸಲೆ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

key words : GramPanchayat-BJP-election-High-ranking- Legislator-aravinda linbavali

website developers in mysore