ಗ್ರಾಮ ದೇವತೆ ಹಬ್ಬ ಆಚರಣೆ ವೇಳೆ ಗುಂಪು ಘರ್ಷಣೆ: ಉದ್ವಿಗ್ನ ಸ್ಥಿತಿ ನಿರ್ಮಾಣ….

ಮೈಸೂರು,ಮಾರ್ಚ್,4,2021(www.justkannada.in): ಗ್ರಾಮ ದೇವತೆ ಹಬ್ಬದ ಆಚರಣೆ ವೇಳೆ ಗುಂಪು ಘರ್ಷಣೆ ನಡೆದು ಹಲವರು ಗಾಯಗೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.jk

ಮೈಸೂರು ತಾಲೂಕಿನ ಮೆಲ್ಲಹಳ್ಳಿ ಗ್ರಾಮದಲ್ಲಿ ರಾತ್ರಿ ಈ ಘಟನೆ ನಡೆದಿದೆ. ಗ್ರಾಮ ದೇವತೆ ಹಬ್ಬದ ಸಂದರ್ಭ ನೃತ್ಯ ಮಾಡುವಾಗ ಎರಡೂ ಗುಂಪುಗಳ ನಡುವೆ ಘರ್ಷಣೆ ಉಂಟಾಗಿದ್ದು,  ಯುವಕರು ಮಚ್ಚು, ಲಾಂಗ್ ಮಾರಕಾಸ್ತ್ರ ಹಿಡಿದು ಹೊಡೆದಾಟ ನಡೆಸಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

group-clashes-village-celebrates-festival-mysore
ಕೃಪೆ-internet

ಘಟನೆಯ ಬಳಿಕ ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು ಸ್ಥಳದಲ್ಲಿ ಪೊಲೀಸರಿಂದ ಬಂದೋಬಸ್ತ್ ಮಾಡಲಾಗಿದೆ.

Key words: group -clashes – village – celebrates –festival- mysore