ಜಿ.ಟಿ ದೇವೇಗೌಡರು ಪಕ್ಷಕ್ಕೆ ಡ್ಯಾಮೇಜ್ ಆಗುವ ಹೇಳಿಕೆ ಕೊಟ್ಟಿಲ್ಲ- ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ.

kannada t-shirts

ಬೆಂಗಳೂರು,ಸೆಪ್ಟಂಬರ್,7,2021(www.justkannada.in): ಜಿ.ಟಿ.ದೇವೇಗೌಡ ದೂರ ಇದ್ದಾರೆ, ಆದ್ರೆ ಅವರು ಪಕ್ಷಕ್ಕೆ ಡ್ಯಾಮೇಜ್ ಆಗುವ ಹೇಳಿಕೆ ಕೊಟ್ಟಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ತಿಳಿಸಿದ್ದಾರೆ.

ಬೆಂಗಳೂರಿನ ಜೆಪಿ ಭವನದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಹೆಚ್.ಡಿ ದೇವೇಗೌಡರು,  ಜಿಟಿ ದೇವೇಗೌಡರು ನನಗೂ ಮಗನಿಗೂ ಟಿಕೆಟ್ ಕೊಡುವ ವಿಚಾರವಾಗಿ ಸಿದ್ದರಾಮಯ್ಯ ಹತ್ರ ಮಾತಾನಾಡಿದ್ದೀನಿ ಅಂತ ಹೇಳಿಕೊಂಡಿದ್ದಾರೆ. ಸಿದ್ದರಾಮಯ್ಯ ಹೈಕಮಾಂಡ್ ಗಮನಕ್ಕೆ ತರುವುದಾಗಿ ಹೇಳಿದ್ದಾರೆ ಅಂತ ಕೂಡ ಹೇಳಿದ್ದಾರೆ. ಆದ್ರೆ ಜೆಡಿಎಸ್ ಪಕ್ಷಕ್ಕೆ ಡ್ಯಾಮೇಜ್ ಆಗುವ ಹೇಳಿಕೆ ಕೊಟ್ಟಿಲ್ಲ, ಹಾಗಾಗಿ ಕ್ರಮ ಕೈಗೊಂಡಿಲ್ಲ ಎಂದರು.

ಜಿ.ಟಿ.ದೇವೇಗೌಡ ಜೊತೆ ನಾನು ರಾಜಕೀಯ ಮಾತನಾಡಿಲ್ಲ. ತಿರುಪತಿಗೆ ಹೋಗಿದ್ದಾಗ ಜಿ.ಟಿ.ದೇವೇಗೌಡ ಸಿಕ್ಕಿದ್ದರು. ಆಗ ನಾನೇ ನೋಡಿ ಕರೆದು ತಮಾಷೆ ಮಾಡಿದ್ದೆ. ನಿನ್ನ ದರ್ಶನ ಇಲ್ಲಿ ಆಯ್ತಲ್ಲಪ್ಪಾ ಎಂದಿದ್ದೆ, ಆಗ ನಿಮ್ಮ ದರ್ಶನ ಆಗಿದ್ದು ಖುಷಿ ಆಯ್ತು ಸರ್ ಅಂದಿದ್ರು ಅಷ್ಟೇ. ಯಾವುದೇ ರಾಜಕೀಯ ಮಾತುಕತೆ ಆಗಿಲ್ಲ ಎಂದು ಹೆಚ್.ಡಿ ದೇವೇಗೌಡರು ತಿಳಿಸಿದರು.

ಕಲಬುರಗಿ ಪಾಲಿಕೆಯಲ್ಲಿ ನಾಲ್ಕು ಸೀಟ್ ಬಂದಿದೆ. ನಾಲ್ಕು ಸೀಟ್ ಬರುತ್ತೆ ಅಂತಾ ನಾನು ಅಂದುಕೊಂಡಿರಲಿಲ್ಲ. ಹೆಚ್ ಡಿಕೆ ಹೋಗಿ ಪ್ರಚಾರ ಮಾಡಿದ್ರು. ಎಲ್ಲಿಯೂ ಇಲ್ಲವೇ ಇಲ್ಲ ಅನ್ನುವ ಸ್ಥಿತಿ ಇಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಬೆಳಗಾವಿಯಲ್ಲಿ ನಮ್ಮ ಸ್ಥಿತಿ ಚೆನ್ನಾಗಿ ಇರಲಿಲ್ಲ.  ಅಲ್ಲಿ ಬಿಜೆಪಿ ಸ್ವೀಪ್ ಮಾಡಿದೆ, ಕಾಂಗ್ರೆಸ್ ಬಗ್ಗೆ ಮಾತಾಡಲು ಹೋಗಲ್ಲ , ಹುಬ್ಬಳ್ಳಿ ಧಾರವಾಡದಲ್ಲಿ ಮೂರ್ನಾಲ್ಕು ಸೀಟ್ ನಿರೀಕ್ಷೆ ಮಾಡಿದ್ದೇವು, ಆದರೆ ಒಂದು ಸೀಟ್ ಬಂದಿದೆ , ರಾಜ್ಯಾದ್ಯಂತ ಸ್ಥಳೀಯ ಸಂಸ್ಥೆಗಳಲ್ಲಿ ಕೆಲ ಕಡೆ ಪೈಪೋಟಿ ಕೊಟ್ಟಿದ್ದೇವೆ ಎಂದು ಹೇಳಿದರು.

ಯಾರೂ ನಿರಾಶೆಯಾಗಬೇಕಿಲ್ಲ,  ನಾವು ಹೆಚ್ಚಿನ ಸದಸ್ಯತ್ವ ನೋಂದಣಿ ಬಗ್ಗೆ ಗಮನ ಕೊಡುತ್ತೇವೆ. ಪಕ್ಷ ಕಟ್ಟುವ ಕಡೆ ಹೆಚ್ಚು ಗಮನ ಕೊಡುತ್ತೇವೆ. ನಾನು ಮತ್ತು ಪಕ್ಷದ ಎಲ್ಲಾ ನಾಯಕರು ಒಳಗೊಂಡಂತೆ ಪಕ್ಷ ಕಟ್ಟುವ ಕೆಲಸಕ್ಕೆ ಆದ್ಯತೆ ಕೊಡುತ್ತೇವೆ. ಒಟ್ಟಾಗಿ ಐಕ್ಯತೆಯಿಂದ ಪಕ್ಷ ಸಂಘಟನೆ ಮಾಡ್ತೀವಿ. ಸೋಲು- ಗೆಲುವು ಅಂತಾ ನೋಡಿ ಕುಳಿತುಕೊಳ್ಳಲು ಆಗಲ್ಲ. ಸೋಲು-ಗೆಲುವು, ಸಿಹಿ-ಕಹಿ ನೋಡಿದ್ದೇವೆ ನಾವು ಎಂದು ಹೆಚ್.ಡಿ ದೇವೇಗೌಡರು ತಿಳಿಸಿದರು.

ಕೋಲಾರ ಶಾಸಕ ಶ್ರೀನಿವಾಸ್ ಗೌಡ ಕಾಂಗ್ರೆಸ್ ಜೊತೆ ಸೇರಿ ಪಕ್ಷಕ್ಕೆ ಡ್ಯಾಮೇಜ್ ಆಗುವ ರೀತಿ ಮಾತಾಡಿದ್ದಾರೆ ಎಂಬ ವಿಚಾರ ಕುರಿತು ಪ್ರತಿಕ್ರಿಯಿಸಿದ ಹೆಚ್.ಡಿ ದೇವೇಗೌಡರು.  ಅವರ ವಿರುದ್ಧ ರಾಜ್ಯಾಧ್ಯಕ್ಷರು ಕ್ರಮ ತೆಗೆದುಕೊಳ್ತಾರೆ. ಕೋಲಾರ ವಿಚಾರದಲ್ಲಿ ಸಹಿಸಲು ಆಗಲ್ಲ ಕೀಳಾಗಿ ಮಾತನಾಡಿದ್ದರೆ ಕ್ರಮ ಅನಿವಾರ್ಯವಾಗಿದೆ, ಕ್ರಮ ತೆಗೆದುಕೊಳ್ತಾರೆ ಎಂದರು.

ಕಲಬುರಗಿ ಪಾಲಿಕೆಯಲ್ಲಿ ಅಧಿಕಾರ ಹಿಡಿಯುವ ವಿಚಾರ ಸಂಬಂಧ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ನನ್ನ ಬಳಿ ಮಾತಾಡಿದ್ದಾರೆ, ಕುಮಾರಸ್ವಾಮಿ ಹತ್ತಿವೂ ಮಾತಾಡಿದ್ದಾರೆ. ಆದ್ರೆ ಸ್ಥಳೀಯ ಮುಖಂಡರ ಅಭಿಪ್ರಾಯ ಪಡೆಯದೇ ನಾವೇ ತೀರ್ಮಾನ ಮಾಡಬಾರದು ಎಂದು ಕುಮಾರಸ್ವಾಮಿಗೆ ಸೂಚಿಸಿದ್ದೇನೆ. ಬಿಜೆಪಿ ಅವರು ನನ್ನ ಜೊತೆ ಯಾರೂ ಮಾತಾನಾಡಿಲ್ಲ. ಖರ್ಗೆ ಅವರು ಪಕ್ಷದವರನ್ನೇ ಸಂಪರ್ಕಿಸಿ‌ ಮಾತಾಡಿದ್ದಾರೆ ಅನ್ಸುತ್ತೆ , ಸಿದ್ದರಾಮಯ್ಯ, ಡಿಕೆಶಿ, ಖರ್ಗೆ ಅವರು ಕೂತು ಮಾತಾಡ್ತಾರೆ ನೋಡೋಣ ಎಂದರು.

ಬಸವರಾಜ ಬೊಮ್ಮಾಯಿ ಅವರು ಕುಮಾರಸ್ವಾಮಿ ಜೊತೆ ಮಾತಾಡಿರಬಹುದು, ನನ್ನ ಜೊತೆ ಬಿಜೆಪಿಯ ಯಾವ ನಾಯಕರು ಮಾತನಾಡಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ತಿಳಿಸಿದರು.

Key words: GT Deve Gowda – not -issued – statement – party -will be damaged-Former Prime Minister -HD Deve Gowda.

website developers in mysore