ಹೆಸರಿಗೆ ಮಾತ್ರ ಪಕ್ಷದ ಅಧ್ಯಕ್ಷನಾಗಿದ್ದೆ, ಜಿಟಿ ದೇವೇಗೌಡ ಕೂಡ ರಾಜೀನಾಮೆ ನೀಡ್ತಾರೆ ಕಾದು ನೋಡಿ: ಎಚ್.ವಿಶ್ವನಾಥ್ ಹೊಸ ಬಾಂಬ್ !

ಬೆಂಗಳೂರು, ಜುಲೈ 07, 2019 (www.justkannada.in): ‘ರಾಜ್ಯದಲ್ಲಿ ಜೆಡಿಎಸ್ ವಾಷ್ ಔಟ್ ಆಗಿದೆ. ಎಚ್.ಡಿ.ಕುಮಾರಸ್ವಾಮಿ ನಮ್ಮ ಮಾತಿಗೆ ಮನ್ನಣೆ ಕೊಡುವ ಕೆಲಸ ಮಾಡಲಿಲ್ಲ. ನಾನು ಹೆಸರಿಗೆ ಮಾತ್ರ ಜೆಡಿಎಸ್ ಅಧ್ಯಕ್ಷನಾಗಿದ್ದೆ ಎಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಚ್.ವಿಶ್ವನಾಥ್ ಹೇಳಿದ್ದಾರೆ.

ಸದ್ಯ ಮುಂಬೈನಲ್ಲಿ ಹೋಟೆಲ್ ನಲ್ಲಿ ತಂಗಿರುವ ಅವರು, ‘ಜಿ.ಟಿ.ದೇವೇಗೌಡ ಕೂಡ ರಾಜೀನಾಮೆ ಕೊಡುತ್ತಾರೆ ಕಾದು ನೋಡಿ. ಸಾ.ರಾ.ಮಹೇಶ್ ನಡವಳಿಕೆ ಸರಿಯಿಲ್ಲ. ಇದರಿಂದ ಜಿ.ಟಿ.ದೇವೇಗೌಡ ಬೇಸತ್ತು ಹೋಗಿದ್ದಾರೆ. ಅವರು ಎಲ್ಲ ಪಕ್ಷದಲ್ಲಿ ಇದ್ದು ಬಂದಿರುವವರು ರಾಜೀನಾಮೆ ನೀಡುವ ಸಾಧ್ಯತೆ ಇದೆ’ ಎಂದು ವಿಶ್ವನಾಥ್ ಹೊಸ ಬಾಂಬ್ ಸಿಡಿಸಿದರು.