ಬಸ್ ನಿಲ್ದಾಣಗಳ ಮೇಲೆ ಗುಂಬಾಜ್ ಇದ್ದರೇ ನಾನೇ ಒಡೆಯುತ್ತೇನೆ – ಸಂಸದ ಪ್ರತಾಪ್ ಸಿಂಹ ಭಾಷಣ ವೈರಲ್.

ಮೈಸೂರು,ನವೆಂಬರ್,14,2022(www.justkannada.in): ಬಸ್ ನಿಲ್ದಾಣದ ಮೇಲೆ  ಗುಂಬಾಜ್ ಇರುವುದನ್ನ ಗಮನಿಸಿದ್ದೇನೆ. ಗುಂಬಾಜ್ ತೆರವುಗೊಳಿಸಲು ಸೂಚನೆ ನೀಡಿದ್ದೇನೆ. ತೆರವುಗೊಳಿಸದಿದ್ದರೇ ನಾನೇ ಒಡೆದು ಹಾಕುತ್ತೇನೆ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿರುವ ಭಾಷಣ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ನ.13ರಂದು ಮೈಸೂರಿನ ರಂಗಾಯಣದಲ್ಲಿ ಟಿಪ್ಪು ನಿಜ ಕನಸುಗಳು ನಾಟಕದ ವೇಳೆ ಸಂಸದ ಪ್ರತಾಪ್ ಸಿಂಹ ಮಾಡಿದ್ದ ಭಾಷಣ ವೈರಲ್ ಆಗಿದೆ.  ಬಸ್​ ನಿಲ್ದಾಣಗಳ ಮೇಲೆ ಗುಂಬಜ್​​ ಇರುವುದನ್ನ ಗಮನಿಸಿದ್ದೇನೆ. ಅಂತಹ ಗುಂಬಜ್ ಇರುವ ಬಸ್​ ನಿಲ್ದಾಣ ತೆರವಿಗೆ ಹೇಳಿದ್ದೇನೆ. ಮಧ್ಯದಲ್ಲಿ ದೊಡ್ಡ ಗುಂಬಜ್ ಹಾಗೂ ಅಕ್ಕ ಪಕ್ಕ ಚಿಕ್ಕ ಗುಂಬಜ್ ಗಳಿದ್ರೆ ಅದು ಮಸೀದಿನೇ.

ಕೆಆರ್ ಐಡಿಎಲ್ ಇಂಜಿನಿಯರ್ ಗಳಿಗೆ 3-4 ದಿನದಲ್ಲಿ ಗುಂಬಜ್​ ತೆರವುಗೊಳಿಸಲು ಸೂಚಿಸಿದ್ದೇನೆ. ಇಲ್ಲವಾದರೇ  ಜೆಸಿಬಿ ತಂದು ನಾನೇ ಒಡೆದು ಹಾಕುತ್ತೇನೆ ಎಂದು ಪ್ರತಾಪ್ ಸಿಂಹ  ಭಾಷಣದಲ್ಲಿ ಹೇಳಿದ್ದಾರೆ.

Key words Gumbaz – bus stops- break down –mysore-MP Pratap  simha