ಹಾಡಿ ಮಕ್ಕಳಿಗೆ ಹಾಡಿನ ಪಾಠ: ಇದು ನಾದಬ್ರಹ್ಮನ ಹುಟ್ಟುಹಬ್ಬದ ದಿನದ ಸಂಕಲ್ಪ

ಬೆಂಗಳೂರು, ಜೂನ್ 24, 2022 (www.justkannada.in): ನಾದಬ್ರಹ್ಮ ಹಂಸಲೇಖ ಅವರು ಆದಿವಾಸಿ ಗಿರಿಜನ 10 ಮಕ್ಕಳನ್ನು ಉಚಿತ ಸಂಗೀತ ಅಭ್ಯಾಸಕ್ಕೆ ಆಯ್ಕೆ ಮಾಡಿದ್ದಾರೆ.

ನಿನ್ನೆ ಹಂಸಲೇಖ ಅವರು ಎಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಮ್ಮಲಾಪುರ ಹಾಡಿಯಲ್ಲಿ ತಮ್ಮ 71ನೇ ಹುಟ್ಟು ಹಬ್ಬವನ್ನು ಆಚರಿಸಿದರು.

ಈ ವೇಳೆ 10 ಮಕ್ಕಳನ್ನು ಆಯ್ಕೆ ಮಾಡಿಕೊಂಡು ಸಂಗೀತದ ಬಗ್ಗೆ ಆಸಕ್ತಿ ಹೊಂದಿರುವ ಈ ಮಕ್ಕಳಿಗೆ ಉಚಿತವಾಗಿ ಸಂಗೀತ ಶಿಕ್ಷಣ ಕೊಡಲಾಗುವುದು ಎಂದು ತಿಳಿಸಿದರು.

ಈ ಬಾರಿ ಕಾಂಕ್ರಿಟ್ ನಾಡಿನಲ್ಲಿ ಹುಟ್ಟುಹಬ್ಬ ಆಚರಣೆ ಮಾಡುವುದು ಬೇಡ ಎಂದುಕೊಂಡು ಕಾಡಿನ ನಡುವೆ ಕಾಡು ಮಕ್ಕಳ ನಡುವೆ ಆಚರಿಸಿಕೊಳ್ಳೋಣ ಎಂದು ಇಲ್ಲಿಗೆ ತಮ್ಮ ಪತ್ನಿಯೊಂದಿಗೆ ಬಂದೆ ಎಂದು ಹಂಸಲೇಖ ಹೇಳಿದರು.