ಆಣೆ ಮಾಡಲು ಹೋಗಿ ಕೆರೆಗೆ ಬಿದ್ದು ಇಬ್ಬರು ಸಾವು.

ಹಾಸನ. ನವೆಂಬರ್,4,2022(www.justkannada.in):  ಹಣಕಾಸಿನ ವಿಚಾರದಲ್ಲಿ ಆಣೆ ಪ್ರಮಾಣ ಮಾಡಲು ಹೋಗಿ ಕೆರೆಗೆ ಬಿದ್ದು ಇಬ್ಬರು ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನ ಜಿಲ್ಲೆ ತೇಜೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಚಂದ್ರು (35) ಆನಂದ್ (30). ಹಣಕಾಸು ವ್ಯವಹಾರದ ವಿಚಾರವಾಗಿ ಇಬ್ಬರ ನಡುವೆ ವೈಮನಸ್ಸು ಉಂಟಾಗಿದ್ದು, ಕಳೆದ ರಾತ್ರಿ ಗಂಗೆ ಮೇಲೆ ಆಣೆ ಮಾಡಲು ಕೆರೆ ಬಳಿಗೆ ಹೋಗಿದ್ದಾರೆ. ಈ ವೇಳೆ ಕಾಲು ಜಾರಿ ಬಿದ್ದು ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಶವವನ್ನ ಹೊರೆತೆಗೆಯಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಹಾಸನ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Key words: Hassan-water-death-two